ADVERTISEMENT

ಗಾಂಜಾ ಸೇವನೆ: ಮೂವರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 15:54 IST
Last Updated 27 ಸೆಪ್ಟೆಂಬರ್ 2022, 15:54 IST
   

ಉಡುಪಿ: ಮಣಿಪಾಲದ ಎಂಡ್‌ ಪಾಯಿಂಟ್ ಹಾಗೂ ಶೀಂಬ್ರ ಸೇತುವೆ ಬಳಿ ಗಾಂಜಾ ಸೇವನೆ ಮಾಡಿದ್ದ ಮೂವರು ಆರೋಪಿಗಳ ವಿರುದ್ಧ ಪೊಲೀಸರು ವಶಕ್ಕೆ ಪಡೆದು ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಎಂಡ್‌ ಪಾಯಿಂಟ್‌ ಬಳಿ ದಿಲ್ಬರ್ ಶಾಕಿರ್‌, ಪಿ.ನಿತಿನ್‌, ಶೀಂಬ್ರಾ ಸೇತುವೆ ಬಳಿ ಶಬಿಬ್ ಎಂಬುವರನ್ನು ವಶಕ್ಕೆ ಪಡೆದು ಮಣಿಪಾಲದ ಕೆಎಂಸಿ ಆಸ್ಪತ್ರೆಯ ಫೊರೆನ್ಸಿಕ್ ವಿಭಾಗದಲ್ಲಿ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT