ಉಡುಪಿ: ಮುಂಬೈನಿಂದ ಕೃಷ್ಣಮಠಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಮಹಿಳೆಯ ಪರ್ಸ್ನಲ್ಲಿದ್ದ ಚಿನ್ನಾಭರಣ, ನಗದು ಹಾಗೂ ದಾಖಲೆಗಳನ್ನು ಕಳವು ಮಾಡಲಾಗಿದೆ.
ಶಾಂತಾ ಜಿ.ಕುಂದರ್ ಸೋಮವಾರ ಕೃಷ್ಣಮಠಕ್ಕೆ ಬಂದು ದೇವರ ದರ್ಶನ ಪಡೆದು ಊಟ ಮಾಡಿದ ಬಳಿಕ ಸುತ್ತಾಡುವಾಗ ಕಳ್ಳರು ಪರ್ಸ್ ಎಗರಿಸಿದ್ದಾರೆ. ಪರ್ಸ್ನಲ್ಲಿ ₹ 1,40,000 ಮೌಲ್ಯದ 30 ಗ್ರಾಂ ಹವಳದ ಸರ, ಆಧಾರ್ಕಾರ್ಡ್, ಪಾನ್ಕಾರ್ಡ್, ಎಟಿಎಂ ಕಾರ್ಡ್ ಹಾಗೂ ₹ 4,000 ನಗದು ಇತ್ತು.
ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.