ADVERTISEMENT

ಹೆಬ್ರಿ: ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 5 ದನಗಳ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2023, 16:05 IST
Last Updated 12 ಜನವರಿ 2023, 16:05 IST
ಹೆಬ್ರಿಯಲ್ಲಿ ರಕ್ಷಣೆ ಮಾಡಲಾದ ದನಗಳು.
ಹೆಬ್ರಿಯಲ್ಲಿ ರಕ್ಷಣೆ ಮಾಡಲಾದ ದನಗಳು.   

ಹೆಬ್ರಿ: ದನಗಳನ್ನು ಹಿಂಸಾತ್ಮಕವಾಗಿ ವಾಹನದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದ ಗೋಕಳ್ಳರು ಪೊಲೀಸರ ಕೈಗೆ ಸಿಕ್ಕಿಬೀಳುವ ಭಯದಿಂದ ಪರಾರಿಯಾಗಲು ಯತ್ನಿಸುವಾಗ ವಾಹನ ಅಪಘಾತಕ್ಕೀಡಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.

ಹೆಬ್ರಿ ಪಿಎಸ್ಐ ಸುದರ್ಶನ್ ದೊಡ್ಡಮನಿ ನೇತೃತ್ವದಲ್ಲಿ ಗುರುವಾರ ಹೆಬ್ರಿಯ ಸೀತಾನದಿಯ ಕೈ ಕಂಬದ ಬಳಿ ವಾಹನಗಳ ತಪಾಸಣೆ ನಡೆಯುತ್ತಿದ್ದಾಗ ನಾಡ್ಪಾಲು ಕಡೆಯಿಂದ ವೇಗವಾಗಿ ವಾಹನ ಬಂದಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ವಾಹನವನ್ನು ನಿಲ್ಲಿಸುವಂತೆ ಚಾಲಕನಿಗೆ ಸೂಚನೆ ನೀಡಿದ್ದಾರೆ.

ಆದರೆ, ಚಾಲಕ ವಾಹನವನ್ನು ನಿಲ್ಲಿಸದೆ ವೇಗವಾಗಿ ಚಲಾಯಿಸಿದ್ದಾನೆ. ಪೊಲೀಸರು ವಾಹನವನ್ನು ಬೆನ್ನಟ್ಟಿದಾಗ ಬಚ್ಚಪ್ಪು ಎಂಬಲ್ಲಿ ಗೋವುಗಳಿದ್ದ ವಾಹನ ಮರಕ್ಕೆ ಡಿಕ್ಕಿಯಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ವಾಹನದಲ್ಲಿ ಐದು ದನಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.