ADVERTISEMENT

ಕುಂದಾಪುರ | ಯೋಜನೆಗಳು ಹೆಚ್ಚು ಜನರನ್ನು ತಲುಪಲಿ: ಸಂಸದ ರಾಘವೇಂದ್ರ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 4:56 IST
Last Updated 4 ಸೆಪ್ಟೆಂಬರ್ 2025, 4:56 IST
ಕುಂದಾಪುರ ಸಮೀಪದ ಬೈಂದೂರು ವಿಧಾನಸಭಾ ಕ್ಷೇತ್ರದ ಇಡೂರು ಕುಂಜ್ಞಾಡಿಯಲ್ಲಿ ಬುಧವಾರ ಪಿಎಂ ಜನ್‌ಮನ್ ಯೋಜನೆ ಕಾಮಗಾರಿಗೆ ಸಂಸದ ಬಿ.ವೈ.ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು.
ಕುಂದಾಪುರ ಸಮೀಪದ ಬೈಂದೂರು ವಿಧಾನಸಭಾ ಕ್ಷೇತ್ರದ ಇಡೂರು ಕುಂಜ್ಞಾಡಿಯಲ್ಲಿ ಬುಧವಾರ ಪಿಎಂ ಜನ್‌ಮನ್ ಯೋಜನೆ ಕಾಮಗಾರಿಗೆ ಸಂಸದ ಬಿ.ವೈ.ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು.   

ಕುಂದಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಜನರಿಗೆ ಅನುಕೂಲವಾಗುವ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರದ ಜನರೂ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಬುಧವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಹಲವು ಕಡೆ ಕೇಂದ್ರ ಸರ್ಕಾರದ ಅನುದಾನದಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಸ್ತಾವನೆ ಸಲ್ಲಿಸಿರುವ ಅನೇಕ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅನೇಕ ಯೋಜನೆಗಳು ಈಗಾಗಲೇ ಅನುಷ್ಠಾನಗೊಂಡಿದ್ದು, ಇನ್ನೂ ಕೆಲವು ಯೋಜನೆಗಳು ಕಾರ್ಯಾರಂಭಗೊಳ್ಳಲಿವೆ. ಇನ್ನೂ ಕೆಲವು ಪ್ರಮುಖ ಪ್ರಸ್ತಾವನೆಗಳಿಗೆ ಶೀಘ್ರ ಮಂಜೂರಾತಿ ದೊರಕಲಿದೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಜನ್‌ಮನ್ ಯೋಜನೆಯಡಿ ₹93.90 ಲಕ್ಷ ವೆಚ್ಚದ ಇಡೂರು– ಕುಂಜ್ಞಾಡಿಯ ಮಕ್ಕಿಮನೆ ರಸ್ತೆ, ₹94.36 ಲಕ್ಷ ವೆಚ್ಚದ ಆಲೂರು– ಹರ್ಕೂರು ರಸ್ತೆ, ₹53 ಲಕ್ಷ ವೆಚ್ಚದ ನೂಜಾಡಿ– ಕಟ್ಟಿನಮಕ್ಕಿ, ₹198.48 ಲಕ್ಷ ವೆಚ್ಚದ ವಂಡ್ಸೆ– ಆತ್ರಾಡಿ ರಸ್ತೆ, ₹60 ಲಕ್ಷ ವೆಚ್ಚದಲ್ಲಿ ಬೆಳ್ಳಾಲ, ನಾಡಾ ಹಾಗೂ ಉಳ್ಳೂರಿನಲ್ಲಿ ನಿರ್ಮಾಣವಾಗಲಿರುವ ವಿವಿಧ ಉದ್ದೇಶ ಕೇಂದ್ರಗಳ ಕಟ್ಟಡ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ, ಶಂಕುಸ್ಥಾಪನೆ ಮಾಡಿದರು.

ADVERTISEMENT

ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ, ಪ್ರಧಾನ ಕಾರ್ಯದರ್ಶಿಗಳಾದ ಕರಣ್ ಪೂಜಾರಿ, ಗೋಪಾಲ್ ಪೂಜಾರಿ, ಮಾಜಿ ಮಂಡಲ ಅಧ್ಯಕ್ಷ ಎನ್. ದೀಪಕ್ ಕುಮಾರ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ರೋಹಿತ್‌ಕುಮಾರ ಶೆಟ್ಟಿ, ಪ್ರಮುಖರಾದ ಡಾ.ಅತುಲ್‌ ಕುಮಾರ್‌ ಶೆಟ್ಟಿ, ಶರತ್ ಶೆಟ್ಟಿ ಉಪ್ಪುಂದ, ಸಾಮ್ರಾಟ್ ಶೆಟ್ಟಿ, ಮಾಲತಿ ನಾಯಕ್, ದೀಪಕ್ ಶೆಟ್ಟಿ ವಂಡ್ಸೆ, ನಿರ್ಮಲ ವಂಡ್ಸೆ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.