ADVERTISEMENT

ಬಾಲಕನನ್ನು ಅಪಹರಿಸಿದ ವ್ಯಕ್ತಿ: ಸಿಸಿಟಿವಿಯಲ್ಲಿ ಕೃತ್ಯ ಸೆರೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 14:40 IST
Last Updated 11 ಜುಲೈ 2021, 14:40 IST
ವ್ಯಕ್ತಿ ಮಗುವನ್ನು ತೆಗೆದುಕೊಂಡು ಹೋಗುತ್ತಿರುವುದು
ವ್ಯಕ್ತಿ ಮಗುವನ್ನು ತೆಗೆದುಕೊಂಡು ಹೋಗುತ್ತಿರುವುದು    

ಉಡುಪಿ: ನಗರದ ಕರಾವಳಿ ಬೈಪಾಸ್‌ ಬಳಿ ವಾಸವಾಗಿದ್ದ ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ದಂಪತಿಯ ಮಗುವನ್ನು ಕಿಡಿಗೇಡಿಯೊಬ್ಬ ಭಾನುವಾರ ಅಪಹರಿಸಿ ಪರಾರಿಯಾಗಿದ್ದಾನೆ.

ಆರೋಪಿ ಮಗುವನ್ನು ಎತ್ತಿಕೊಂಡು ಕುಂದಾಪುರ ಮಾರ್ಗದ ಬಸ್‌ ಹತ್ತುತ್ತಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಧೋಳ ತಾಲ್ಲೂಕಿನ ಅರುಣ್ ಹಾಗೂ ಭಾರತಿ ದಂಪತಿಯ ಎರಡೂವರೆ ವರ್ಷದ ಶಿವರಾಜ್ ಅಪಹರಣಕ್ಕೊಳಗಾದ ಮಗು. ದಂಪತಿಗೆ ಪರಿಚಿತನಾಗಿರುವ ಪರಶು ಎಂಬಾತ ಕೃತ್ಯ ಎಸಗಿರುವ ಸಂಶಯವಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಅಪಹರಣ ಹೇಗೆ

ADVERTISEMENT

ಆರೋಪಿ ಪರಶು ಕೆಲವು ದಿನಗಳ ಹಿಂದಷ್ಟೆ ದಂಪತಿಗೆ ಪರಿಚಿತನಾಗಿದ್ದ. ಪ್ರತಿದಿನ ಮಗುವಿಗೆ ಚಾಕ್‌ಲೇಟ್‌ ಕೊಡಿಸಿ ಸಲುಗೆ ಬೆಳೆಸಿಕೊಂಡಿದ್ದ. ಭಾನುವಾರ ಬೆಳಿಗ್ಗೆ ತಿಂಡಿ ಕೊಡಿಸಿಕೊಂಡು ಬರುವುದಾಗಿ ಮಗುವನ್ನು ಕರೆದೊಯ್ದು ಮರಳಿ ಬಂದಿಲ್ಲ ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಸಾಕ್ಷ್ಯ ಹಾಗೂ ಬಸ್‌ನ ಸಿಬ್ಬಂದಿ ಹೇಳಿಕೆಯನ್ನಾಧರಿಸಿ ಉಡುಪಿಯ ಸಂತೆಕಟ್ಟೆ ಸೇರಿದಂತೆ ಹಲವು ಕಡೆಗಳಲ್ಲಿ ಆರೋಪಿಗೆ ಶೋಧ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.