ADVERTISEMENT

ಹಾಡಹಗಲೇ ದುಷ್ಕೃತ್ಯ: ಮನೆಗೆ ನುಗ್ಗಿ ಮಗು ಅಪಹರಣ

​ಪ್ರಜಾವಾಣಿ ವಾರ್ತೆ
Published 11 ಜುಲೈ 2019, 14:25 IST
Last Updated 11 ಜುಲೈ 2019, 14:25 IST
ಅಪಹರಣಕ್ಕೊಳಗಾದ ಮಗು ಸಾನ್ವಿಕ
ಅಪಹರಣಕ್ಕೊಳಗಾದ ಮಗು ಸಾನ್ವಿಕ   

ಉಡುಪಿ: ಕುಂದಾಪುರ ತಾಲ್ಲೂಕಿನ ಯಡಮೊಗ್ಗೆಯ ಕುಮ್ಟಿಬೇರು ಗ್ರಾಮದ ಸಂತೋಷ್ ಎಂಬುವರ ಮನೆಗೆ ನುಗ್ಗಿದ ಮುಸುಕುಧಾರಿಗಳು 1 ವರ್ಷ 3 ತಿಂಗಳ ಹೆಣ್ಣು ಮಗುವನ್ನು ಅಪಹರಿಸಿದ್ದಾರೆ.

ಸಾನ್ವಿಕ ಅಪಹರಣಕ್ಕೊಳಗಾದ ಮಗು. ಗುರುವಾರ ಬೆಳಿಗ್ಗೆ ತಾಯಿ ರೇಖಾ ಜತೆ ಮಗು ಮಲಗಿದ್ದಾಗ ದುಷ್ಕರ್ಮಿಗಳು ಅಪಹರಿಸಿದ್ದಾರೆ. ಅಪಹರಣ ಸುದ್ದಿ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಸೃಷ್ಟಿಸಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಎಸ್‌ಪಿ ನಿಶಾ ಜೇಮ್ಸ್‌ ಸ್ಥಳಕ್ಕೆ ಭೇಟಿ ನೀಡಿ ಪೋಷಕರ ಬಳಿ ಮಾಹಿತಿ ಕಲೆಹಾಕಿದರು. ಶ್ವಾನದಳವನ್ನು ಕರೆಸಲಾಗಿತ್ತು.

ADVERTISEMENT

ಮಗುವಿನ ಮಾಹಿತಿ ಸಿಕ್ಕರೆ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಎಸ್‌ಪಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.