ADVERTISEMENT

ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಸಿಎಂ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 10:43 IST
Last Updated 21 ಡಿಸೆಂಬರ್ 2019, 10:43 IST
   

ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ಮಣಿಪಾಲಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ವೇಳೆಸಚಿವರಾದ ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ,ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಮುಂತಾದವರುಹಾಜರಿದ್ದರು.

ಶ್ರೀಗಳು ಚೇತರಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದಡಾ.ವೀರೇಂದ್ರ ಹೆಗ್ಗಡೆ

ಪೇಜಾವರ ಶ್ರೀಗಳು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು,ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮದರ್ಶಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದರು.

ADVERTISEMENT

ಶನಿವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿ ಅವರು, 'ಶ್ರೀಗಳು ಚೇತರಿಸಿಕೊಳ್ಳುವ ವಿಶ್ವಾಸವಿದೆ. ವಯೋಸಹಜದ ಕಾರಣ ಆರೋಗ್ಯ ಸುಧಾರಣೆ ತಡವಾಗುತ್ತಿದೆ. ಶ್ರೀಗಳಿಗೆ ಬೇರೆ ಯಾವುದೇ ಕಾಯಿಲೆಗಳಿಲ್ಲವಾದ್ದರಿಂದ ಗುಣಮುಖರಾಗುವ ವಿಶ್ವಾಸವಿದೆ. ಅವರ ಆರೋಗ್ಯಕ್ಕೆ ಭಕ್ತರ ಪ್ರಾರ್ಥನೆ ಮುಖ್ಯ' ಎಂದರು.

ಶ್ರೀಗಳ ಅನಾರೋಗ್ಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಇದೇ ವೇಳೆ ವಿರೇಂದ್ರ ಹೆಗ್ಗಡೆಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.