ADVERTISEMENT

ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಂಪ್ಯೂಟರ್‌ ಜ್ಞಾನ ಅಗತ್ಯ: ಭರತ್‌ರಾಜ್‌

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 5:20 IST
Last Updated 28 ಡಿಸೆಂಬರ್ 2025, 5:20 IST
ಬ್ರಹ್ಮಾವರ ರುಡ್‌ಸೆಟ್‌ ಸಂಸ್ಥೆಯಲ್ಲಿ ಶನಿವಾರ ಆರಂಭವಾದ ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿಗೆ ಬ್ರಹ್ಮಾವರ ಎಸ್‌.ಎಂ.ಎಸ್‌ ಕಾಲೇಜಿನ ಉಪನ್ಯಾಸಕ ಭರತ್‌ರಾಜ್‌ ಚಾಲನೆ ನೀಡಿದರು.
ಬ್ರಹ್ಮಾವರ ರುಡ್‌ಸೆಟ್‌ ಸಂಸ್ಥೆಯಲ್ಲಿ ಶನಿವಾರ ಆರಂಭವಾದ ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿಗೆ ಬ್ರಹ್ಮಾವರ ಎಸ್‌.ಎಂ.ಎಸ್‌ ಕಾಲೇಜಿನ ಉಪನ್ಯಾಸಕ ಭರತ್‌ರಾಜ್‌ ಚಾಲನೆ ನೀಡಿದರು.   

ಬ್ರಹ್ಮಾವರ: ಕಂಪ್ಯೂಟರ್ ಕೌಶಲ ಕರಗತ ಮಾಡಿಕೊಳ್ಳುವುದು ಅಗತ್ಯ. ಹಾಗಾಗಿ ಛಲದಿಂದ ಮುಂದುವರಿಯಿರಿ ಎಂದು ಬ್ರಹ್ಮಾವರ ಎಸ್‌.ಎಂ.ಎಸ್‌ ಕಾಲೇಜಿನ ಉಪನ್ಯಾಸಕ ಭರತ್‌ರಾಜ್‌ ಹೇಳಿದರು.

ಬ್ರಹ್ಮಾವರ ರುಡ್‌ಸೆಟ್‌ ಸಂಸ್ಥೆಯಲ್ಲಿ ಶನಿವಾರ ಆರಂಭವಾದ ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಡಾ.ಬೊಮ್ಮಯ್ಯ ಎಂ ಅಧ್ಯಕ್ಷತೆ ವಹಿಸಿ ಟ್ಯಾಲಿ, ಜಿ.ಎಸ್‌.ಟಿ, ಟೈಪಿಂಗ್ ಮುಂತಾದವು ಅಗತ್ಯದ ವಿಷಯಗಳು. ಹಾಗಾಗಿ ಅಂಜಿಕೆಯಿಲ್ಲದೆ ಆಸಕ್ತಿಯಿಂದ ತರಬೇತಿಯನ್ನು ಪಡೆದು ಸ್ವಉದ್ಯೋಗದಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಧೃಢರಾಗಿ ಎಂದರು.

ADVERTISEMENT

ತರಬೇತಿಯ ಅತಿಥಿ ಉಪನ್ಯಾಸಕಿ ರಾಜಲಕ್ಷ್ಮಿ ಇದ್ದರು. ರುಡ್‌ಸೆಟ್‌ ಸಂಸ್ಥೆಯ ಉಪನ್ಯಾಸಕಿ ಚೈತ್ರಾ ಕೆ ನಿರೂಪಿಸಿದರು. ಉಪನ್ಯಾಸಕ ಸಂತೋಷ ಶೆಟ್ಟಿ ಸ್ವಾಗತಿಸಿದರು. ಕಚೇರಿ ಸಹಾಯಕ ಶಾಂತಪ್ಪ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.