ADVERTISEMENT

ರಾಹುಲ್ ಅನರ್ಹತೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 16:18 IST
Last Updated 29 ಮಾರ್ಚ್ 2023, 16:18 IST
ರಾಹುಲ್ ಗಾಂಧಿ ಅವರ ಸಂಸತ್ ಸ್ಥಾನ ಅನರ್ಹಗೊಳಿಸಿದ್ದನ್ನು ಖಂಡಿಸಿ ಬುಧವಾರ  ಅಜ್ಜರಕಾಡು ಉದ್ಯಾನದಲ್ಲಿರುವ ಗಾಂಧಿ ಪ್ರತಿಮೆ ಬಳಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು
ರಾಹುಲ್ ಗಾಂಧಿ ಅವರ ಸಂಸತ್ ಸ್ಥಾನ ಅನರ್ಹಗೊಳಿಸಿದ್ದನ್ನು ಖಂಡಿಸಿ ಬುಧವಾರ  ಅಜ್ಜರಕಾಡು ಉದ್ಯಾನದಲ್ಲಿರುವ ಗಾಂಧಿ ಪ್ರತಿಮೆ ಬಳಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು   

ಉಡುಪಿ: ರಾಹುಲ್ ಗಾಂಧಿ ಅವರ ಸಂಸತ್ ಸ್ಥಾನ ಅನರ್ಹಗೊಳಿಸಿದ್ದನ್ನು ಖಂಡಿಸಿ ಬುಧವಾರ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು.

ಅಜ್ಜರಕಾಡಿನ ಉದ್ಯಾನದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ‘ದೇಶದಲ್ಲಿ ವಿರೋಧ ಪಕ್ಷಗಳ ಧನಿ ಅಡಗಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸತ್ಯದ ಪರವಾಗಿ ಧನಿ ಎತ್ತಿದ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹಗೊಳಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಬಿಜೆಪಿಯ ಬೆದರಿಕೆಗಳಿಗೆ ಕಾಂಗ್ರೆಸ್‌ ಜಗ್ಗುವುದಿಲ್ಲ. ರಾಹುಲ್ ಗಾಂಧಿಯ ಹೋರಾಟಕ್ಕೆ ಕಾರ್ಯಕರ್ತರು ಬೆನ್ನಿಗಿದ್ದಾರೆ. ಕಾಂಗ್ರೆಸ್‌ ಧನಿಯನ್ನು ಹತ್ತಿಕ್ಕುವ ಪ್ರಯತ್ನ ಸಫಲವಾಗುವುದಿಲ್ಲ ಎಂದರು.

ADVERTISEMENT

ಪ್ರತಿಭಟನೆಯಲ್ಲಿ ಮುಖಂಡರಾದ ಎಂ.ಎ.ಗಫೂರ್, ಅಮೃತ್ ಶೆಣೈ, ರಮೇಶ್ ಕಾಂಚನ್‌, ಡಾ.ಸುನಿತಾ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್, ಇಸ್ಮಾಯಿಲ್ ಆತ್ರಾಡಿ, ಪ್ರಖ್ಯಾತ್ ಶೆಟ್ಟಿ, ಹರೀಶ್ ಕಿಣಿ, ರೋಷಣಿ ಒಲಿವೆರಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.