ಬೈಂದೂರು: ಪಟ್ಟಣದ ನೀರೋಡಿಯಲ್ಲಿ ಹೊಸದಾಗಿ ನಿರ್ಮಿಸಿದ್ದ ರಸ್ತೆ ಹಾಗೂ ಸೇತುವೆಯು ಈಚೆಗೆ ಸುರಿದ ಮಳೆಗೆ ಕೊಚ್ಚಿಹೋಗಿದೆ.
ಬುಡಕಟ್ಟು ಸಮುದಾಯದವರೇ ಹೆಚ್ಚಾಗಿ ವಾಸವಾಗಿರುವ ಈ ಪ್ರದೇಶಕ್ಕೆ ಇರುವ ಪ್ರಮುಖ ಸಂಪರ್ಕ ರಸ್ತೆಯೇ ಕೊಚ್ಚಿ ಹೋಗಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಪ್ರಭಾವಿ ರಾಜಕಾರಣಿಯೊಬ್ಬರ ಸಹೋದರ ಈ ಕಾಮಗಾರಿಯ ಗುತ್ತಿಗೆದಾರರಾಗಿದ್ದು, ಗುಣಮಟ್ಟಕ್ಕೆ ಆದ್ಯತೆ ನೀಡಿಲ್ಲ ಎನ್ನುವುದು ಸ್ಥಳೀಯರು ಆರೋಪಿಸಿದ್ದಾರೆ. ರಸ್ತೆ ಶೀಘ್ರ ದುರಸ್ತಿ ಮಾಡಬೇಕು ಎಂಬುದು ಗ್ರಾಮಸ್ಥರ ಆಗ್ರಹ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.