ADVERTISEMENT

ಉಡುಪಿ: ಕೋವಿಡ್‌ಗೆ ಮತ್ತೊಂದು ಬಲಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 14:17 IST
Last Updated 30 ಜೂನ್ 2020, 14:17 IST
   

ಉಡುಪಿ: ಮುಂಬೈನಿಂದ ಬಂದಿದ್ದ 48 ವರ್ಷದ ಕೋವಿಡ್‌ ಸೋಂಕಿತ ವ್ಯಕ್ತಿ ಭಾನುವಾರ ಬೈಂದೂರಿನ ಕಾಲ್ತೋಡು ಗ್ರಾಮದಲ್ಲಿ ಮೃತಪಟ್ಟಿದ್ದಾರೆ.

ಯಕೃತ್ತು ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿ ಈಚೆಗೆ ಕುಟುಂಬ ಸದಸ್ಯರೊಂದಿಗೆ ಜಿಲ್ಲೆಗೆ ಬಂದಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ. ಮರಣಾನಂತರ ವ್ಯಕ್ತಿಯ ಗ‌ಂಟಲ ದ್ರವ ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವುದು ಪತ್ತೆಯಾಗಿದೆ. ಮಾರ್ಗಸೂಚಿಗಳ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್‌ ಸೋಂಕಿಗೆ ತುತ್ತಾಗಿದ್ದ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.