ADVERTISEMENT

ಐವರು ಸೋಂಕಿತರು ಸಾವು; 962 ಮಂದಿಗೆ ಕೋವಿಡ್‌

ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 9 ಮೇ 2021, 15:53 IST
Last Updated 9 ಮೇ 2021, 15:53 IST

ಉಡುಪಿ: ಜಿಲ್ಲೆಯಲ್ಲಿ ಶನಿವಾರ ಐವರು ಸೋಂಕಿತರು ಮೃತಪಟ್ಟಿದ್ದಾರೆ. ಉಡುಪಿಯ 58, 63, 58 ವರ್ಷದವರು ಹಾಗೂ ಕುಂದಾಪುರದ 66, 67 ವರ್ಷದ ವೃದ್ಧರು ಕೋವಿಡ್‌ನಿಂದ ಮೃತಪಟ್ಟವರು. ಜಿಲ್ಲೆಯಲ್ಲಿ ಕಳೆದ 6 ದಿನಗಳಲ್ಲಿ 32 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

962 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಸೋಂಕಿತರಲ್ಲಿ ಉಡುಪಿಯ 309, ಕುಂದಾಪುರದ 266, ಕಾರ್ಕಳದ 384 ಹಾಗೂ ಇತರೆ ಜಿಲ್ಲೆಗಳ ಮೂವರು ಸೇರಿದ್ದಾರೆ. 201 ಮಂದಿಗೆ ರೋಗದ ಲಕ್ಷಣಗಳಿದ್ದರೆ, 761 ಸೋಂಕಿತರಿಗೆ ಲಕ್ಷಣಗಳು ಕಾಣಿಸಿಕೊಂಡಿಲ್ಲ. 19 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದರೆ, 943 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದಿನಿಂದ ಲಸಿಕೆ:

ADVERTISEMENT

ಜಿಲ್ಲೆಯ ನಾಲ್ಕು ಲಸಿಕಾ ಕೇಂದ್ರಗಳಲ್ಲಿ ಸೋಮವಾರ ಮಧ್ಯಾಹ್ನದಿಂದ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡಲಾಗುತ್ತಿದ್ದು, ಈಗಾಗಲೇ ನೋಂದಣಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು ಎಂದು ಡಿಎಚ್ಒ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಉಡುಪಿಯ ಜಿಲ್ಲಾ ಆಸ್ಪತ್ರೆ, ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ಶಾಲೆ, ಕುಂದಾಪುರ ತಾಲ್ಲೂಕು ಆಸ್ಪತ್ರೆ ಹಾಗೂ ಕಾರ್ಕಳ ತಾಲ್ಲೂಕು ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಗುವುದು. ಲಸಿಕೆಗೆ ನೋಮದಣಿ ಮಾಡಿಕೊಂಡಿರುವವರಿಗೆ ಸೋಮವಾರ ಬೆಳಿಗ್ಗೆ ಮೊಬೈಲ್‌ಗೆ ಸಂದೇಶ ರವಾನೆಯಾಗಲಿದ್ದು, ಸಂದೇಶ ಬಂದವರು ಮಾತ್ರ ಲಸಿಕೆ ಪಡೆಯಲು ಬರಬೇಕು ಎಂದು ಡಿಎಚ್‌ಒ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.