ADVERTISEMENT

ಗಾಂಜಾ ಸೇವನೆ: ಮೂವರ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 15:31 IST
Last Updated 28 ಸೆಪ್ಟೆಂಬರ್ 2022, 15:31 IST

ಉಡುಪಿ: ಮಣಿಪಾಲದ ಶೀಂಬ್ರಾ ಸೇತುವೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಮೂವರ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಚೆರಿಯನ್‌ ಅಬ್ರಾಹಂ, ಜೊಯಲ್‌ ಜಾನ್ಸನ್‌, ಮ್ಯಾಥಿವ್‌ ಆರೋಪಿಗಳಾಗಿದ್ದು ಮೂವರನ್ನು ಮಣಿಪಾಲದ ಕೆಎಂಸಿ ಫೊರೆನ್ಸಿಕ್ ವಿಭಾಗದಲ್ಲಿ ಪರೀಕ್ಷೆಗೊಳಪಡಿಸಲಾಗಿದ್ದು ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಮಣಿಪಾಲ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕಳವು

ADVERTISEMENT

ಉಡುಪಿ: ಹಯಗ್ರೀವ ನಗರ 7ನೇ ಕ್ರಾಸ್‌ನಲ್ಲಿರುವ ಡಾ.ಮಂಜುನಾಥ ಭಟ್ಟ ಎಂಬುವರ ಮನೆಯಲ್ಲಿ ಕಳವು ನಡೆದಿದೆ. ಕಪಾಟಿನಲ್ಲಿದ್ದ ₹ 20 ಸಾವಿರ ಮೌಲ್ಯದ ಚಿನ್ನದ ಉಂಗುರ, ₹ 4000 ನಗದು ಕಳವು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.