ADVERTISEMENT

ಬಸ್‌ನಲ್ಲಿ ಲ್ಯಾಪ್‌ಟಾಪ್ ಕಳವು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 16:18 IST
Last Updated 16 ಸೆಪ್ಟೆಂಬರ್ 2021, 16:18 IST

ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಗುರುವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಮಾಧುರಿ ಮಾಧವ ಪುರಾಣಿಕ್‌ ಎಂಬುವರ ಲ್ಯಾಪ್‌ಟಾಪ್‌ ಕಳುವಾಗಿದೆ.

ಶಿರಸಿಗೆ ತೆರಳುತ್ತಿದ್ದಮಾಧುರಿ ಲ್ಯಾಪ್‌ಟಾಪ್ ಅನ್ನು ಬಸ್‌ನ ಸೀಟಿನ ಮೇಲಿಟ್ಟು ಉಡುಪಿಯ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ತೆರಳಿದ್ದರು. ಬಳಿಕ ಬಂದು ನೋಡುವಾಗ ಲ್ಯಾಪ್‌ಟಾಪ್ ಕಳುವಾಗಿತ್ತು. ಲ್ಯಾಪ್‌ಟಾಪ್ ಬ್ಯಾಗ್‌ನಲ್ಲಿದ್ದ ಆಧಾರ್‌ ಕಾರ್ಡ್‌, ಮತದಾರ ಗುರುತಿನ ಕಾರ್ಡ್‌, ಗ್ರಂಥಾಲಯ ಕಾರ್ಡ್‌, ಎಟಿಎಂ ಕಾರ್ಡ್‌, ಟಿಸಿ, ಪವರ್‌ ಬ್ಯಾಂಕ್‌, ಚಾಲನಾ ಪರವಾನಗಿ ಸೇರಿದಂತೆ ಹಲವು ವಸ್ತುಗಳು ಕಳುವಾಗಿವೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT