ಉಡುಪಿ:ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹಲವೆಡೆ ಗಾಂಜಾ ಸೇವನೆ ಮಾಡುತ್ತಿದ್ದವರನ್ನು ವಶಕ್ಕೆ ಪಡೆದು ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮಣಿಪಾಲದ ಮನೀಶ್ ಆಪಾರ್ಟ್ಮೆಂಟ್ ಬಳಿ ಬ್ರಿಟ್ಟೊ ಕೆ.ಎಪನ್, ಜಿಬ್ರಾನ್ ಖಾನ್, ಜೆರ್ಮಿನ್ ಜೋಸೆಫ್, ಟೈಗರ್ ಸರ್ಕಲ್ ಬಳಿ ಧ್ರುವ ಫಲಡೆಸೈ ಹಾಗೂ ಮೂಡನಿಡಂಬೂರು ಗ್ರಾಮದ ಸರ್ವೀಸ್ ಬಸ್ ನಿಲ್ದಾಣದ ಬಳಿ ದನುಷ್ ಕುಂದರ್, ಕೌಶಿಕ್ ಎಂಬುವರನ್ನು ವಶಕ್ಕೆ ಪಡೆದು ಕೆಎಂಸಿ ಫೊರೆನ್ಸಿಕ್ ವಿಭಾಗದಲ್ಲಿ ಪರೀಕ್ಷೆಗೊಳಪಡಿಸಲಾಯಿತು. ಗಾಂಜಾ ಸೇವನೆ ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆನ್ಲೈನ್ ವಂಚನೆ
ಉಡುಪಿ: ಕೊರಂಗ್ರಪಾಡಿಯ ನಿತಿನ್ ಕೃಷ್ಣ ಅವರ ಆ್ಯಕ್ಸಿಸ್ ಬ್ಯಾಂಕ್ ಖಾತೆಯಿಂದ ವಂಚಕರು ₹ 1,33,898 ನಗದು ಎಗರಿಸಿದ್ದಾರೆ.
ನಿತಿನ್ ಕೃಷ್ಣಗೆ ಫೆ.3ರಂದು ಕರೆ ಮಾಡಿದ ವಂಚಕರು, ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಕ್ರೆಡಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಂಬರ್, ಸಿವಿವಿ ನಂಬರ್ ಹಾಗೂ ಮೊಬೈಲ್ ಒಟಿಪಿ ವಿವರ ಪಡೆದು ಕ್ರೆಡಿಟ್ ಕಾರ್ಡ್ನಿಂದ ₹ 1,20,100, ಡೆಬಿಟ್ ಕಾರ್ಡ್ನಿಂದ ₹ 13,798 ದೋಚಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.