ADVERTISEMENT

ಮದುವೆಗೆ ಮನೆಯವರಿಂದ ವಿರೋಧ; ಕಾರಿನೊಳಗೆ ನವದಂಪತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 22 ಮೇ 2022, 19:05 IST
Last Updated 22 ಮೇ 2022, 19:05 IST
ಆತ್ಮಹತ್ಯೆ ಮಾಡಿಕೊಂಡ ಯಶವಂತ್ ಯಾದವ್, ಜ್ಯೋತಿ
ಆತ್ಮಹತ್ಯೆ ಮಾಡಿಕೊಂಡ ಯಶವಂತ್ ಯಾದವ್, ಜ್ಯೋತಿ   

ಉಡುಪಿ: ಮದುವೆಗೆ ಮನೆಯವರಿಂದ ವಿರೋಧ ವ್ಯಕ್ತವಾಗಿದ್ದರಿಂದ ಮನನೊಂದ ಜೋಡಿ ಬ್ರಹ್ಮಾವರದ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದೆ.

ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (24), ಜ್ಯೋತಿ (22) ಆತ್ಮಹತ್ಯೆ ಮಾಡಿಕೊಂಡವರು.

ಮೇ 18ರಂದು ಬೆಂಗಳೂರಿನಿಂದ ಮಂಗಳೂರಿಗೆ ಬೈಕ್‌ನಲ್ಲಿ ಬಂದಿದ್ದ ಯಶವಂತ್‌ ಹಾಗೂ ಜ್ಯೋತಿ 21ರಂದು ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಮದುವೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದಿದ್ದ ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದರು.

ADVERTISEMENT

ಮಂಗಳೂರಿನಲ್ಲಿ ಸೆಲ್ಫ್‌ ಡ್ರೈವ್ ಕಾರ್ ಬಾಡಿಗೆ ಪಡೆದು ಮಧ್ಯರಾತ್ರಿವರೆಗೂ ಸುತ್ತಾಡಿದ ಜೋಡಿ ಕುಟುಂಬದವರಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮೊಬೈಲ್‌ ಸಂದೇಶ ರವಾನಿಸಿ ಲೋಕೇಶನ್ ಕೂಡ ಕಳಿಸಿದ್ದಾರೆ. ನಂತರ ಕಾರಿನೊಳಗೆ ಕುಳಿತು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾರಿನ ನಂಬರ್ ಪಡೆದು ಪರಿಶೀಲನೆ ನಡೆಸಿದ ಬ್ರಹ್ಮಾವರ ಪೊಲೀಸರಿಗೆ ಮೃತರ ಮಾಹಿತಿ ಲಭ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.