ADVERTISEMENT

ಕುಂದಾಪುರ: ಮಹಿಳೆ ಹಲ್ಲೆ ನಡೆಸಿ ಆಭರಣ ದೋಚಿದ ಖದೀಮ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 16:23 IST
Last Updated 5 ಆಗಸ್ಟ್ 2022, 16:23 IST

ಕುಂದಾಪುರ: ಶಾಲೆಯಿಂದ ಬರುತ್ತಿದ್ದ ಮಕ್ಕಳನ್ನು ಕರೆದೊಯ್ಯಲು ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಯ ತಲೆಗೆ ರಾಡ್‌ನಿಂದ ಹಲ್ಲೆ ನಡೆಸಿದ ದುಷ್ಕರ್ಮಿಯೊಬ್ಬ ಚಿನ್ನಾಭರಣ ದೋಚಿರುವ ಘಟನೆ ಕೊರ್ಗಿ ಗ್ರಾಮ ಪಂಚಾಯಿತಿಯ ಕಾಡಿನಬೆಟ್ಟುವಿನ ದಬ್ಬೆಕಟ್ಟೆ ಮುಖ್ಯ ರಸ್ತೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಕೊರ್ಗಿ ನಿವಾಸಿ ದೇವಕಿ (32) ಹಲ್ಲೆಗೊಳಗಾದವರು. ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ದೇವಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾನೆ. ದೇವಕಿ ಅವರ ತಲೆಗೆ ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.