ಕಾಪು (ಉಡುಪಿ ಜಿಲ್ಲೆ): ತಾಲ್ಲೂಕಿನ ಮಲ್ಲಾರು ಫಕೀರನಕಟ್ಟೆಯಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟಿದ್ದಾರೆ.
ಐವರು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ರಜಬ್ ಅಲಿ (44), ರಜಬ್ ಬ್ಯಾರಿ (47) ಮೃತರು.
ಗುಜರಿ ಅಂಗಡಿಯಲ್ಲಿದ್ದ ಸಿಲಿಂಡರ್ ಏಕಾಏಕಿ ಸಿಡಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಜೀವವಾಗಿ ದಹನವಾಗಿದ್ದಾರೆ. ನಯಾಜ್, ಈರಪ್ಪ, ಹಸನಬ್ಬ, ಫಹೀಮ್ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಹಾಗೂ ವೀರೇಶ್ ಉಡುಪಿಯ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಕಿ ನಂದಿಸಲು ಮುಂದಾಗಿದ್ದ ಬೆಳಪು ಗ್ರಾಮ ಪಂಚಾಯಿತಿ ಸದಸ್ಯ ಫಹಿಂ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.