ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ಪಲಿಮಾರು ಮಠದಲ್ಲಿ ಹಮ್ಮಿಕೊಂಡಿರುವ ವಸಂತ ಧಾರ್ಮಿಕ ಶಿಬಿರಕ್ಕೆ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಭಾನುವಾರ ಕೃಷ್ಣಮಠದ ರಾಜಾಂಗಣದಲ್ಲಿ ಚಾಲನೆ ನೀಡಿದರು.
ಆ ಬಳಿಕ ಮಾತನಾಡಿದ ವಿದ್ಯಾಧೀಶ ಸ್ವಾಮೀಜಿ, ಶಾಲಾಪಠ್ಯದಲ್ಲಿ ಸಿಗದೇ ಇರುವ ಪುರಾಣಗಳ ಮಾಹಿತಿ ಹಾಗೂ ಧಾರ್ಮಿಕ ಕಾರ್ಯಗಳ ಬಗ್ಗೆ ಈ ಶಿಬಿರದಲ್ಲಿ ಪಡೆದುಕೊಳ್ಳಬಹುದು ಎಂದರು.
ಸುವಿದ್ಯೇಂದ್ರತೀರ್ಥ ಶ್ರೀಪಾದರು ಮಾತನಾಡಿ, ಶ್ರೀ ವಿದ್ಯಾಮಾನ್ಯತೀರ್ಥರ ಸಂಕಲ್ಪದಂತೆ ಇಪ್ಪತ್ತೆರಡು ವರ್ಷಗಳಿಂದ ಈ ಶಿಬಿರ ನಡೆಯುತ್ತಿದೆ. ಧರ್ಮಾಚರಣೆಯ ಬಗ್ಗೆ ನಮ್ಮ ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿ ಕಲಿಸಿದರೆ, ಸಂಪ್ರದಾಯ, ಆಚರಣೆಗಳು ಉಳಿಯುತ್ತವೆ ಎಂದು ಹೇಳಿದರು. ಮಠದ ವಿದ್ವಾಂಸ ಕಲ್ಮಂಜೆ ವಾಸುದೇವ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.