ADVERTISEMENT

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ‌

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 8:26 IST
Last Updated 7 ಸೆಪ್ಟೆಂಬರ್ 2025, 8:26 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಪಡುಬಿದ್ರಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ತೋಡಿನಲ್ಲಿ ಪತ್ತೆಯಾಗಿದೆ. ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ADVERTISEMENT

ಮೃತರನ್ನು ಎಲ್ಲೂರಿನ ಸದಾಶಿವ (77) ಎಂದು ಗುರುತಿಸಲಾಗಿದ್ದು, ಅವರು ಗದ್ದೆ ಕಡೆಗೆ ಹುಲ್ಲು ತರಲು ಹೋಗಿದ್ದರು. ಬಳಿಕ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದಾಶಿವ ಅವರನ್ನು ಹುಡುಕಾಟದಲ್ಲಿದ್ದಾಗ ವಿದ್ಯುತ್ ತಂತಿ ತುಂಡಾದ ಸ್ಥಳದಿಂದ ಸುಮಾರು 10 ಮೀಟರ್ ದೂರದಲ್ಲಿ ತೋಡಿನ ಸುಮಾರು 2 ಅಡಿ ನೀರಿನಲ್ಲಿ ಮೃತದೇಹ ಪತ್ತೆಯಾಯಿತು. ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.