ADVERTISEMENT

ಮಧ್ವ ಸರೋವರಕ್ಕೆ ಬಿದ್ದು ಸಾವು

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 9:42 IST
Last Updated 12 ಫೆಬ್ರುವರಿ 2020, 9:42 IST

ಉಡುಪಿ: ಕೃಷ್ಣಮಠದ ಮಧ್ವ ಸರೋವರಕ್ಕೆ ಬಿದ್ದು ಮಂಗಳವಾರ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಕ್ಯಾಪ್ಟನ್ ಜಿ.ಶ್ರೀಧರನ್ (62) ಮೃತರು. ಬೆಳಗಿನ ಜಾವ 4ರ ಸುಮಾರಿಗೆ ಮಧ್ವ ಸರೋವರದಲ್ಲಿ ಸ್ನಾನ ಮಾಡಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಅವರು ಮೃತಪಟ್ಟಿದ್ದಾರೆ. ಉಡುಪಿ ನಗರ ಠಾಣೆ ಯುಡಿಆರ್‌ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT