ಬೈಂದೂರು: ಹಕ್ಲಾಡಿ ಗ್ರಾಮದ ಯಳೂರು ಗೋಳಿಕಟ್ಟೆಯ ಕೃಷಿಕ ಸುಧಾಕರ ಶೆಟ್ಟಿ(52) ಶನಿವಾರ ತಮ್ಮ ಗದ್ದೆಯಲ್ಲಿ ಭತ್ತದ ನೇಜಿ ನಾಟಿ ಕೆಲಸ ಮಾಡುತ್ತಿದ್ದಾಗ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಕೃಷಿಜಾಗದಲ್ಲಿ ಕುಸಿದು ಬಿದ್ದವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಒಯ್ದಾಗ ಅವರು ಅದಾಗಲೇ ಮೃತರಾಗಿದ್ದರೆಂದು ವೈದ್ಯರು ದೃಢಪಡಿಸಿದ್ದರು. ಮೃತರ ಪುತ್ರ ಪ್ರತಾಪ ಶೆಟ್ಟಿ ನೀಡಿರುವ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.