ಕಾರ್ಕಳ: ಲೇಖಕ, ಸಂಘಟಕಪ್ರೊ. ಎಂ. ರಾಮಚಂದ್ರ (80) ಶುಕ್ರವಾರ ಮುಂಜಾನೆ ಹೃದಯಾಘಾತದಿಂದ
ನಿಧನರಾಗಿದ್ದಾರೆ.
‘ಎಂ.ಆರ್.’ ಎಂದೇ ಜನಪ್ರಿಯರಾಗಿದ್ದ ರಾಮಚಂದ್ರ ಅವರು ಸಂಶೋಧನೆ, ಸಾಹಿತ್ಯ, ವಿಮರ್ಶೆ,ಉಪನ್ಯಾಸ, ಪತ್ರಿಕೋದ್ಯಮದಲ್ಲೂ ಹೆಸರು ಗಳಿಸಿದ್ದರು.
ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಸುಳ್ಯದ ಮಂಡೆ
ಕೋಲಿನಲ್ಲಿ ಜನಿಸಿದ್ದರು. ಕನ್ನಡ ಪುಸ್ತಕ ಪ್ರಾಧಿಕಾರವು 2018ನೇ ಸಾಲಿನ ‘ಡಾ.ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’ಗೆ ಇವರನ್ನು ಆಯ್ಕೆ ಮಾಡಿತ್ತು.
ರಾಮಚಂದ್ರ ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.