ADVERTISEMENT

ಜಿಂಕೆ ಕೊಂಬುಗಳ ವಶ: ಆರೋಪಿ ಪರಾರಿ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2019, 14:34 IST
Last Updated 28 ನವೆಂಬರ್ 2019, 14:34 IST

ಉಡುಪಿ: ಮಣಿಪಾಲದ ಡಿಸಿ ಕಚೇರಿ ಬಳಿಯಿರುವ ನಂದಿನಿ ಮಿಲ್ಕ್ ಪಾರ್ಲರ್ ಬಳಿ ಬುಧವಾರ ರಾತ್ರಿ ಪೊಲೀಸರು ದಾಳಿ ನಡೆಸಿ ಚಿಂಕೆ ಕೊಂಬು ವಶಪಡಿಸಿಕೊಂಡಿದ್ದಾರೆ.

ಕಾರ್ಕಳದ ರಿಚರ್ಡ್ ಎಂಬಾತ ಬೈಕ್‌ನಲ್ಲಿ ಜಿಂಕೆ ಕೊಂಬು ಮಾರಾಟ ಮಾಡಲು ಹೊಂಚುಹಾಕುತ್ತಿರುವ ವಿಚಾರ ತಿಳಿದ ಸರ್ಕಲ್ ಇನ್‌ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿದೆ. ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ಈ ಸಂದರ್ಭ ಆರೋಪಿಯ ಬೈಕ್‌ನಲ್ಲಿದ್ದ ಜಿಂಕೆಯ 2 ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಣಿಪಾಲ ಠಾಣೆಯಲ್ಲಿ ವನ್ಯಜೀವಿ ರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.