ADVERTISEMENT

ಕುಂದಾಪುರದಲ್ಲಿ ಜಿಲ್ಲಾ ರೈತ ಸಮ್ಮೇಳನ 14ರಂದು

ಕೃಷಿ ತಜ್ಞರಿಂದ ವಿಚಾರಗೋಷ್ಠಿ, ವಿಚಾರ ವಿನಿಮಯ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 10:00 IST
Last Updated 10 ಡಿಸೆಂಬರ್ 2019, 10:00 IST
ಉಡುಪಿ ಜಿಲ್ಲಾ ರೈತ ಸಮ್ಮೇಳನ ಆಯೋಜನೆ ಕುರಿತು ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಮಂಗಳವಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಉಡುಪಿ ಜಿಲ್ಲಾ ರೈತ ಸಮ್ಮೇಳನ ಆಯೋಜನೆ ಕುರಿತು ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಮಂಗಳವಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.   

ಉಡುಪಿ: ಭಾರತೀಯ ಕಿಸಾನ್ ಸಂಘದಿಂದ ಡಿ.14ರಂದು ಬೆಳಿಗ್ಗೆ 9ರಿಂದ ಕುಂದಾಪುರ ವ್ಯಾಸರಾಜ ಕಲಾ ಮಂದಿರದಲ್ಲಿ ಉಡುಪಿ ಜಿಲ್ಲಾ ರೈತ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ತಿಳಿಸಿದರು.

ಮಂಗಳವಾರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕೃಷಿಕ ವರ್ಗವನ್ನು ಸಂಘಟಿಸುವ, ಸಂಘಟಿತ ಕೃಷಿಕರಿಗೆ ಕೃಷಿ ಕ್ಷೇತ್ರದ ಸಾಧಕರು, ಚಿಂತಕರು, ಸಂಘಟಕರಿಂದ ಮಾರ್ಗದರ್ಶನ ನೀಡುವ ಸಲುವಾಗಿ ರೈತ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದರು.

ಅಂದಿನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್‌.ರಾಜೇಂದ್ರ ಕುಮಾರ್, ಉದ್ಘಾಟಿಸಲಿದ್ದಾರೆ. ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಐ.ಎನ್‌.ಬಸವೇಗೌಡ ಅಧ್ಯಕ್ತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಸಿಪಿಸಿಆರ್‌ಐ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ಅನಿತಾ ಕರುಣ್‌, ಜಿಲ್ಲಾ ಹಾಪ್‌ಕಾಮ್ಸ್‌ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ ಭಾಗವಹಿಸಲಿದ್ದಾರೆ.

ADVERTISEMENT

ತೆಂಗಿನ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಕುರಿತು ಹಿರಿಯ ವಿಜ್ಞಾನಿ ಡಾ.ಕೆ.ಬಿ.ಹೆಬ್ಬಾರ್, ಸಾವಯವ ಕೃಷಿಯಲ್ಲಿ ರೈತನ ಭವಿಷ್ಯ ಕುರಿತು ರಾಜ್ಯ ಸಾವಯವ ಕೃಷಿ ಮಿಷನ್ ಅಧ್ಯಕ್ಷ ಆನಂದ, ಕೃಷಿಯಲ್ಲಿ ವೈಜ್ಞಾನಿಕತೆ, ಯಾಂತ್ರೀಕರಣ ಕುರಿತು ಕಂಬದಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್‌ಚಂದ್ರ ಶೆಟ್ಟಿ, ಪಶ್ಚಿಮಘಟ್ಟದ ಸಸ್ಯವೈವಿಧ್ಯಗಳ ಅಳಿವು ಉಳಿವು ಕುರಿತು ಪರಿಸರ ತಜ್ಞ ಎಂ.ದಿನೇಶ್ ನಾಯಕ್ ವಿಚಾರ ಮಂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.‌

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನವೀನ್‌ ಚಂದ್ರ ಜೈನ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ವಿ.ಪೂಜಾರಿ, ಉಪಾಧ್ಯಕ್ಷ ರಾಮಚಂದ್ರ ಅಲ್ಸೆ, ಶ್ರೀನಿವಾಸ್‌ ಭಟ್‌, ಕುಂದಾಪುರ ಅಧ್ಯಕ್ಷ ಸೀತಾರಾಮ ಗಾಣಿಗ, ಉಡುಪಿ ಅಧ್ಯಕ್ಷ ಪಾಂಡುರಂಗ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಆಸ್ತಿಕ ಶಾಸ್ತ್ರಿ, ಚಂದ್ರಹಾಸ ಶೆಟ್ಟಿ, ರಾಜೀವ್ ಶೆಟ್ಟಿ, ಮಹಾಬಲ ಬಾಯರಿ, ಸುಂದರ ಶೆಟ್ಟಿ, ಕೆ.ಪಿ.ಭಂಡಾರಿ, ಸದಾನಂದ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.