
ಬ್ರಹ್ಮಾವರ (ಉಡುಪಿ): ಸಾಲಿಗ್ರಾಮದ ಡಿವೈನ್ ಪಾರ್ಕ್ ಸಂಸ್ಥಾಪಕ ಡಾ.ಎ. ಚಂದ್ರಶೇಖರ ಉಡುಪ (75) ಹೃದಯಾಘಾತದಿಂದ ಬುಧವಾರ ನಿಧನರಾದರು.
ಅವರಿಗೆ ಪತ್ನಿ, ಪುತ್ರ ಡಾ.ವಿವೇಕ ಉಡುಪ, ಸೊಸೆ, ಪುತ್ರಿ ಇದ್ದಾರೆ. ಅಂತ್ಯಸಂಸ್ಕಾರ ಬುಧವಾರ ಸಂಜೆ ಸಾಲಿಗ್ರಾಮದಲ್ಲಿ ನಡೆಯಿತು.
70ರ ದಶಕದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾಗ ವಿವೇಕಾನಂದರ ಚಿಂತನೆಗಳ ಪ್ರಭಾವಕ್ಕೆ ಒಳಗಾಗಿ ಡಿವೈನ್ ಪಾರ್ಕ್ ಸಂಸ್ಥೆಯನ್ನು ಆರೋಗ್ಯ, ಆಧ್ಯಾತ್ಮದ ಚಿಂತನೆಯಲ್ಲಿ ಪ್ರಾರಂಭಿಸಿದ್ದರು. ಅವರಿಗೆ ದೇಶ, ವಿದೇಶದ ಲಕ್ಷಾಂತರ ಅನುಯಾಯಿಗಳಿದ್ದು, ಅಕ್ಕರೆಯಿಂದ ‘ಡಾಕ್ಟರ್ಜೀ’ ಎಂದೇ ಕರೆಯುತ್ತಿದ್ದರು.
ಡಿವೈನ್ ಪಾರ್ಕ್ನ ಸಹಸಂಸ್ಥೆಯಾಗಿ ಕೋಟ ಮೂಡುಗಿಳಿಯಾರಿನಲ್ಲಿ ಎಸ್ಎಚ್ಆರ್ಎಫ್ (ಯೋಗಬನ) ಸ್ಥಾಪಿಸಿ, ಯೋಗ, ಪ್ರಕೃತಿ, ಆಯುರ್ವೇದಗಳ ಜತೆಗೆ ಆಧ್ಯಾತ್ಮಿಕ ಚಿಕಿತ್ಸಕ ಕ್ರಮವನ್ನೂ ಮುನ್ನೆಲೆಗೆ ತಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.