ಉಡುಪಿ: ಶಿರ್ವ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಹಾಗೂ ಉಡುಪಿ ಧರ್ಮಪ್ರಾಂತ್ಯದ ಸಹಾಯಕ ಧರ್ಮ ಗುರುಮಹೇಶ್ ಡಿಸೋಜಾ (36) ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಾಲೆಯ ಕ್ಯಾಬಿನ್ ಒಳಗೆ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಡುಪಿ ಧರ್ಮಪ್ರಾಂತ್ಯ ರಚನೆಯಾದ ಬಳಿಕ ಮಹೇಶ್ ಡಿಸೋಜ ಅವರು ಮೊದಲಸಹಾಯಕ ಧರ್ಮ ಗುರುವಾಗಿ ನೇಮಕವಾಗಿದ್ದರು.
ಶಿರ್ವದ ಮೂಡುಬೆಳ್ಳೆ ಮೂಲದ ಡಿಸೋಜಾ ಅವರು 2013ರಲ್ಲಿ ಧರ್ಮಗುರು ದೀಕ್ಷೆ ಪಡೆದಿದ್ದರು.ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.