ಉಡುಪಿ: ಕೃಷ್ಣಮಠದಲ್ಲಿ ಶುಕ್ರವಾರ ಮಧ್ಯಾಹ್ನ ವಿಟ್ಲಪಿಂಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಕೃಷ್ಣನಿಗೆ ಮಹಾಪೂಜೆ ನೆರವೇರಿದ ಬಳಿಕ, ಚಿನ್ನದ ರಥದಲ್ಲಿ ಕೃಷ್ಣನ ಮಣ್ಣಿನ ಮೂರ್ತಿಯನ್ನಿಟ್ಟು ರಥ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.
ಗೊಲ್ಲರು ಮೊಸರು ಕುಡಿಕೆ ಒಡೆದು ಸಂಭ್ರಮಿಸಿದರು. ರಥಬೀದಿಯಲ್ಲಿ ಕೃಷ್ಣನ ವಿವಿಧ ಲೀಲೋತ್ಸವಗಳು ಆರಂಭಗೊಂಡಿವೆ. ಉತ್ಸವದಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿಲ್ಲ. ಮಠದ ಸಿಬ್ಬಂದಿ ಸಾಂಪ್ರದಾಯಿಕ ಆಚರಣೆಗಳಲ್ಲಿ ಭಾಗವಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.