ADVERTISEMENT

ಕೆಎಂಸಿಯಲ್ಲಿ ಯಶಸ್ವಿ ಎಂಡೊಸ್ಕೊಪಿ ಸ್ಪಾಂಜ್ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2022, 14:18 IST
Last Updated 6 ಅಕ್ಟೋಬರ್ 2022, 14:18 IST

ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಅನ್ನನಾಳದ ರಂಧ್ರಕ್ಕೆ ಮತ್ತು ಅನಾಸ್ಟೊಮೊಟಿಕ್ ಸೋರಿಕೆ ಪ್ರಕ್ರಿಯೆಗೆ ಅಪರೂಪದ ಎಂಡೋಸ್ಕೋಪಿ ಸ್ಪಾಂಜ್ (ಎಂಡೋವಾಕ್) ಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.

ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗವು ರಾಜ್ಯದಲ್ಲಿ ಮೊದಲ ಬಾರಿಗೆ ಅಪರೂಪದ ಎಂಡೋಸ್ಕೋಪಿ ಸ್ಪಾಂಜ್ ಚಿಕಿತ್ಸೆ ನಡೆಸಿದೆ.

ವಿವರ:

ADVERTISEMENT

51 ವರ್ಷದ ವ್ಯಕ್ತಿಗೆ ಅನ್ನನಾಳದ ಕ್ಯಾನ್ಸರ್ ಇರುವುದು ಪರೀಕ್ಷೆಯಲ್ಲಿ ಪತ್ತೆಯಾದ ನಂತರ ಶಸ್ತ್ರಚಿಕಿತ್ಸೆ ನಡೆಸಿ ಕೀಮೋಥೆರಪಿ ನೀಡಲಾಗಿತ್ತು. ವಾರದ ನಂತರ ರೋಗಿಯಲ್ಲಿ ಅನಾಸ್ಟೊಮೊಟಿಕ್ ಡಿಹಿಸೆನ್ಸ್‌ನೊಂದಿಗೆ ಮೆಡಿಯಾಸ್ಟಿನಿಟಿಸ್ ಸಮಸ್ಯೆ ಕಾಣಿಸಿಕೊಂಡಿತು.

ಈ ಸಮಸ್ಯೆ ಸರಿಪಡಿಸಲು ವೈದ್ಯರು ಮತ್ತೊಂದು ಶಸ್ತ್ರಚಿಕಿತ್ಸೆಯ ಅವಶ್ಯಕತೆಯ ಬಗ್ಗೆ ಆಲೋಚಿಸಿದ್ದರು. ಆದರೆ, ರೋಗಿಯ ಸ್ಥಿತಿ ಸರಿಯಾಗಿಲ್ಲದ ಕಾರಣ ಶಸ್ತ್ರಚಿಕಿತ್ಸೆ ಮಾಡುವುದು ಕಷ್ಟವಾಗಿತ್ತು. ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಮುಖ್ಯಸ್ಥ ಡಾ.ಶಿರನ್ ಶೆಟ್ಟಿ ಮತ್ತು ಡಾ.ಬಾಲಾಜಿ, ಸರ್ಜಿಕಲ್ ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ.ನವೀನ ಕುಮಾರ್, ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜೋಸೆಫ್ ಥಾಮಸ್ ವೈದ್ಯರ ತಂಡವು ರೋಗಿಗೆ ಎಂಡೋಸ್ಪಾಂಜ್/ವ್ಯಾಕ್ಯೂಮ್ ಥೆರಪಿ ಎಂಬ ನವೀನ ಚಿಕಿತ್ಸೆ ನೀಡಲು ನಿರ್ಧರಿಸಿತು.

ಅದರಂತೆ ಎಂಡೋಸ್ಕೋಪಿಯ ಮೂಲಕ ಸ್ಪಾಂಜ್ ಅನ್ನು ಮೆಡಿಯಾಸ್ಟಿನಮ್ ಕುಳಿಯಲ್ಲಿ ಇರಿಸಲಾಗಿದ್ದು, ಯಾವುದೇ ಯಾವುದೇ ಶಸ್ತ್ರಚಿಕಿತ್ಸೆಯಿಲ್ಲದೆ ದೋಷ ಸರಿಪಡಿಸಲು ಸಾದ್ಯವಾಗಿದೆ. ರೋಗಿಯು ಚೇತರಿಸಿಕೊಂಡಿದ್ದು ಬಾಯಿಯ ಮೂಲಕ ಆಹಾರ ತಿನ್ನಲು ಸಾಧ್ಯವಾಗಿದೆ ಎಂದು ಡಾ.ಶಿರನ್ ಶೆಟ್ಟಿ ತಿಳಿಸಿದ್ದಾರೆ.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಅಪರೂಪದ ಚಿಕಿತ್ಸಾ ವಿಧಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ತಂಡಕ್ಕೆ ಅಭಿನಂದಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.