ಉಡುಪಿ: ಉಡುಪಿ ನಗರ ಸರ್ಕಲ್ ಇನ್ಸ್ಪೆಕ್ಟರ್ ಎಂ.ಮಂಜುನಾಥ್ ಅವರ ಹೆಸರಿನಲ್ಲಿ ಕಿಡಿಗೇಡಿಗಳು ಮತ್ತೊಮ್ಮೆ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ನಕಲಿ ಖಾತೆ ರಚಿಸಿದ್ದ ವಂಚಕರು ಹಲವರಿಗೆ ಹಣಕ್ಕೆ ಬೇಡಿಕೆ ಇರಿಸಿದ್ದರು. ಇದರ ವಿರುದ್ಧ ಸಿಪಿಐ ಮಂಜುನಾಥ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.
ಸ್ನೇಹಿತರು ಹಾಗೂ ಪರಿಚಿತರು ವಂಚಕರ ಜಾಲದ ಬಗ್ಗೆ ಎಚ್ಚರವಾಗಿರಬೇಕು. ನನ್ನ ಹೆಸರಿನಲ್ಲಿ ಹೊಸದಾಗಿ ಸ್ನೇಹದ ಕೋರಿಕೆಗೆ ಒಪ್ಪಿಗೆ ಸೂಚಿಸಬಾರದು ಎಂದು ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.