ADVERTISEMENT

ಬಡಗುತಿಟ್ಟಿನ ಯಕ್ಷಗಾನ ಕಲಾವಿದ ಲಕ್ಷ್ಮಣ ಕಾಂಚನ್ ಬಾರ್ಕೂರು ನಿಧನ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 5:46 IST
Last Updated 19 ಅಕ್ಟೋಬರ್ 2020, 5:46 IST
ಲಕ್ಷ್ಮಣ ಕಾಂಚನ್ ಬಾರ್ಕೂರು
ಲಕ್ಷ್ಮಣ ಕಾಂಚನ್ ಬಾರ್ಕೂರು    

ಉಡುಪಿ: ಬಡಗುತಿಟ್ಟಿನ ಯಕ್ಷಗಾನ ಕಲಾವಿದ ಲಕ್ಷ್ಮಣ ಕಾಂಚನ್ ಬಾರ್ಕೂರು (70) ಸೋಮವಾರ ಬೆಳಿಗ್ಗೆ ನಿಧನರಾದರು.
ಮೃತರಿಗೆ ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ವಿವಿಧ ಮೇಳಗಳಲ್ಲಿ ನಾಲ್ಕು ದಶಕಗಳಿಗೂ ಹೆಚ್ಚುಕಾಲ ಲಕ್ಷ್ಮಣ ಕಾಂಚನ್ ಸೇವೆ ಸಲ್ಲಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಅವರಿಗೆ ಗೌರವಿಸಲಾಗಿತ್ತು. ಲಕ್ಷ್ಮಣ ಕಾಂಚನ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT