ಬ್ರಹ್ಮಾವರ: ಚೇರ್ಕಾಡಿ ಶಾರದಾ ಪ್ರೌಢಶಾಲೆಯಲ್ಲಿ 27 ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ವಿಜ್ಞಾನ ಶಿಕ್ಷಕ ಕೆ. ಜಯಪ್ರಕಾಶ ಶೆಟ್ಟಿ ಅವರನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ಸಿಬ್ಬಂದಿ, ಹಳೆವಿದ್ಯಾರ್ಥಿಗಳ ಪರವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಆಡಳಿತ ಮಂಡಳಿ ಅಧ್ಯಕ್ಷ ಎಚ್. ಶಶಿಧರ ಶೆಟ್ಟಿ ಬೆರಂಬೈಲು ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ನಿಕಟಪೂರ್ವ ಅಧ್ಯಕ್ಷ ಬಿ. ಮಹಾಬಲೇಶ್ವರ ಉಡುಪ, ಉಪಾಧ್ಯಕ್ಷ ಎಚ್. ಸುದರ್ಶನ ಹೆಗ್ಡೆ, ಕಾರ್ಯದರ್ಶಿ ರಾಘವೇಂದ್ರ ಎಂ. ಸಾಮಗ, ಖಜಾಂಚಿ ಆರೂರು ತಿಮ್ಮಪ್ಪ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸೀತಾರಾಮ ಶೆಟ್ಟಿ, ಚೇರ್ಕಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣ ನಾಯ್ಕ, ತಾಲ್ಲೂಕು ಸಹಶಿಕ್ಷಕರ ಸಂಘದ ಅಧ್ಯಕ್ಷ ಮನೋಹರ ಶೆಟ್ಟಿ, ಮುಖ್ಯಶಿಕ್ಷಕ ಮಂಜುನಾಥ ನಾಯ್ಕ, ಶಿಕ್ಷಕಿ ರೇವತಿ ಎಸ್, ವಿದ್ಯಾರ್ಥಿಗಳಾದ ಆಶಿಕ್, ಅನುಪಮಾ ಭಾಗವಹಿಸಿದ್ದರು.
ಆಡಳಿತಾಧಿಕಾರಿ ಬಿ.ಟಿ.ನಾಯ್ಕ ಸ್ವಾಗತಿಸಿದರು. ಶಿಕ್ಷಕಿ ಮಮತಾ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ರಮೇಶ್ ಶೆಟ್ಟಿ ನಿರೂಪಿಸಿದರು. ಲಿಂಗಪ್ಪ ಬಿ. ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.