ADVERTISEMENT

ನಾಲ್ವರು ಮೀನುಗಾರರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 10 ಮೇ 2020, 16:05 IST
Last Updated 10 ಮೇ 2020, 16:05 IST

ಉಡುಪಿ: ತಾಂತ್ರಿಕ ಸಮಸ್ಯೆಯಿಂದಾಗಿ ಗಂಗೊಳ್ಳಿ ಸಮುದ್ರ ವ್ಯಾಪ್ತಿಯಲ್ಲಿ ಅಪಾಯಕ್ಕೆ ಸಿಲುಕಿದ್ದ ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ.

ಭಾನುವಾರ ಬೆಳಿಗ್ಗೆ ಗಂಗೊಳ್ಳಿ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದಾಗ ಮರ್ಲಿಚಿಕ್ಕು ಹೆಸರಿನ ಬೋಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಮಾಹಿತಿ ದೊರೆಯಿತು. ಕೂಡಲೇ ಸ್ಥಳಕ್ಕೆ ತೆರಳಿ ಬೋಟ್‌ನಲ್ಲಿದ್ದ ಮಣಿಕಂಠ ಖಾರ್ವಿ, ನಾಗಪ್ಪ ಖಾರ್ವಿ, ಪಾಂಡುರಂಗ ಖಾರ್ವಿ ಎಂಬ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಗೊಳ್ಳಿ ಸಿಎಸ್‌ಪಿ ಪಿಎಸ್‌ಐ ಸಂದೀಪ್ ಮಾರ್ಗದರ್ಶನದಲ್ಲಿ ಸಿಬ್ಬಂದಿ, ಗುರುರಾಜ್‌,್ರಸಾದ್‌, ಕ್ಯಾಪ್ಟನ್ ದೀಪಕ್‌, ಕಲಾಸಿ ಶೈಲೇಶ್‌ ಕುಮಾರ್ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.