ADVERTISEMENT

ಉಡು‍ಪಿ | ಉಚ್ಚಿಲದಲ್ಲಿ ಮೀನುಗಾರಿಕಾ ದೋಣಿ ಮುಳುಗಡೆ: ಏಳು ಮೀನುಗಾರರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2022, 10:05 IST
Last Updated 12 ಡಿಸೆಂಬರ್ 2022, 10:05 IST
ಮೀನುಗಾರರಿಂದ ರಕ್ಷಣಾ ಕಾರ್ಯ
ಮೀನುಗಾರರಿಂದ ರಕ್ಷಣಾ ಕಾರ್ಯ   

ಪಡುಬಿದ್ರಿ (ಉಡುಪಿ ಜಿಲ್ಲೆ): ಮೀನುಗಾರಿಕೆಗೆ ತೆರಳಿದ್ದ ದೋಣಿ ಉಚ್ಚಿಲ ಸಮೀಪದ ಕಡಲಿನಲ್ಲಿ ಸೋಮವಾರ ಮುಳುಗಡೆಯಾಗಿದ್ದು ಏಳು ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ಉಚ್ಚಿಲದ ನಿವಾಸಿ ವಿಮಲಾ ಸಿ. ಪುತ್ರನ್ ಮಾಲೀಕತ್ವದ ಶ್ರೀ ಗಿರಿಜಾ ದೋಣಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿತ್ತು. ಹವಾಮಾನ ವೈಪರೀತ್ಯದಿಂದ ಕಡಲು ಪ್ರಕ್ಷುಬ್ಧಗೊಂಡಿರುವ ಕಾರಣ ದೈತ್ಯ ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಸಿಲುಕಿ ಮುಳುಗಡೆಯಾಗಿದೆ.

ಸಮೀಪದಲ್ಲಿದ್ದ ಮೀನುಗಾರರು ನೆರವಿಗೆ ಧಾವಿಸಿ ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ.

ADVERTISEMENT

ಬೋಟ್‌ನಲ್ಲಿದ್ದ ಬಲೆ ಹಾಗೂ ಹೈ ಸ್ಪೀಡ್ ಎಂಜಿನ್ ಸಮುದ್ರ ಪಾಲಾಗಿದ್ದು 6.5 ಲಕ್ಷ ನಷ್ಟ ಸಂಭವಿಸಿದೆ ಎಂದು ಮಾಲೀಕರು ತಿಳಿಸಿದ್ದಾರೆ. ಕಾಪು ಶಾಸಕ ಲಾಲಾಜಿ ಮೆಂಡನ್ ಮೀನುಗಾರರನ್ನು ಭೇಟಿ ನೀಡಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.