ADVERTISEMENT

ಸಾಂಪ್ರದಾಯಿಕ ಆಹಾರ ಬಳಸಿ: ಸತೀಶ್ ನಾಯಕ್

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 2:53 IST
Last Updated 29 ಸೆಪ್ಟೆಂಬರ್ 2022, 2:53 IST
ನವರಂಗೋತ್ಸವ, ನಾಟ್ಕ ಮುದ್ರಾಡಿ ಸಂಭ್ರಮ ಮತ್ತು ಅವ್ವ ನನ್ನವ್ವ ರಂಗೋತ್ಸವದಲ್ಲಿ ಸಿದ್ಧನಕೊಳ್ಳ ಪುಣ್ಯಕ್ಷೇತ್ರದ  ಶಿವಕುಮಾರ ಸ್ವಾಮೀಜಿಯವರಿಗೆ ಆದಿಮುದ್ರಾ ಪ್ರಶಸ್ತಿ ಪ್ರದಾನ ಮಾಡಲಾಯಿತು
ನವರಂಗೋತ್ಸವ, ನಾಟ್ಕ ಮುದ್ರಾಡಿ ಸಂಭ್ರಮ ಮತ್ತು ಅವ್ವ ನನ್ನವ್ವ ರಂಗೋತ್ಸವದಲ್ಲಿ ಸಿದ್ಧನಕೊಳ್ಳ ಪುಣ್ಯಕ್ಷೇತ್ರದ  ಶಿವಕುಮಾರ ಸ್ವಾಮೀಜಿಯವರಿಗೆ ಆದಿಮುದ್ರಾ ಪ್ರಶಸ್ತಿ ಪ್ರದಾನ ಮಾಡಲಾಯಿತು   

ಕಾರ್ಕಳ: ತಾಲ್ಲೂಕಿನ ದುರ್ಗ ಪಂಚಾಯಿತಿಯಲ್ಲಿ ನವಚೇತನ ಸಂಜೀವಿನಿ ಒಕ್ಕೂಟದಿಂದ ಪೋಷಣ್ ಅಭಿಯಾನದ ಅಡಿಯಲ್ಲಿ ಆಹಾರ ಮೇಳ ಕಾರ್ಯಕ್ರಮವು ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ನಡೆಯಿತು.

ಅಭಿಯಾನ ಉದ್ಘಾಟಿಸಿದ ಅಧ್ಯಕ್ಷ ಸತೀಶ್ ನಾಯಕ್ ಮಾತನಾಡಿ ರಾಸಾಯನಿಕಗಳನ್ನು ಉಪಯೋಗಿಸಿ ಆಹಾರ ಪದಾರ್ಥ ಬೆಳೆಯುವ ಚಾಳಿ ಹೆಚ್ಚಾಗಿದೆ. ಇದರಿಂದ ಅರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ. ಹೀಗಾಗಿ ಸಾಂಪ್ರದಾಯಿಕ ಆಹಾರದ ಮಹತ್ವ ತಿಳಿಸುವ ಕಾರ್ಯ ಆಗಬೇಕು ಎಂದರು.

ಸಂಜೀವಿನಿ ಒಕ್ಕೂಟದ ತಾಲ್ಲೂಕು ವ್ಯವಸ್ಥಾಪಕ ಗಣೇಶ್ ಮಾತನಾಡಿ ಸಂಜೀವಿನಿ ಸದಸ್ಯರಿಂದ ಇಂತಹ ಕಾರ್ಯಕ್ರಮಗಳು ತಾಲ್ಲೂಕಿನ ಎಲ್ಲಾ ಕಡೆ ನಡೆಯುತ್ತಿದ್ದು ಸ್ವ ಉದ್ಯೋಗಗಳನ್ನು ಕೈಗೊಳ್ಳುವ ಮೂಲಕ ಸ್ವಾವಲಂಬಿ ಬದುಕು ರೂಪಿಸಲಾಗುತ್ತಿದೆ ಎಂದರು. ಒಕ್ಕೂಟದ ಅಧ್ಯಕ್ಷೆ ಶೈನಾಜ್, ಗ್ರಾಮ ಕರಣಿಕರಾದ ಮೇಘನಾ, ಪಂಚಾಯಿತಿ ಕಾರ್ಯದರ್ಶಿ ಸುಬ್ಬಯ್ಯ ಇದ್ದರು. ಶಶಿಕಲಾ ನಿರೂಪಿಸಿದರು. ಉಮಾವತಿ ವಂದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.