ADVERTISEMENT

2 ಕೆ.ಜಿ ಗಾಂಜಾ ವಶ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 16:07 IST
Last Updated 20 ಆಗಸ್ಟ್ 2020, 16:07 IST
ಗಾಂಜಾ ಆರೋಪಿಗಳು
ಗಾಂಜಾ ಆರೋಪಿಗಳು   

ಉಡುಪಿ: ಬ್ರಹ್ಮಾವರ ತಾಲ್ಲೂಕಿನ ವಾರಂಬಳ್ಳಿ ಗ್ರಾಮದ ಧರ್ಮಾವರಂ ಆಡಿಟೋರಿಯಂ ಬಳಿ ಗುರುವಾರ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹೊಸನಗರ ತಾಲ್ಲೂಕಿನ ಆಸಿಫ್ ಬಾಷಾ, ರಿಯಾಜ್ ಬಂಧಿತರು. ಆರೋಪಿಗಳಿಂದ 2 ಕೆ.ಜಿ 38 ಗ್ರಾಂ ಗಾಂಜಾ, 2 ಮೊಬೈಲ್‌, ಒಂದುಕಾರು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತಿನ ಮೌಲ್ಯ ₹ 3,13,500 ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸೆನ್ ಅಪರಾಧ ಠಾಣೆಯ ಪಿಎಸ್‌ಐ ರಾಮಚಂದ್ರ ನಾಯಕ್, ಪಿಎಸ್‌ಐ ಲಕ್ಷ್ಮಣ, ನಾರಾಯಣ, ಎಎಸ್‌ಐ ಕೇಶವ ಗೌಡ, ಸಿಬ್ಬಂದಿ ಕೃಷ್ಣಪ್ರಸಾದ್, ಪ್ರಸನ್ನ ಸಾಲ್ಯಾನ್, ಶ್ರೀಧರ್, ಪ್ರವೀಣ, ಪ್ರದೀಪ ಶೆಟ್ಟಿ, ಅರುಣ್ ಶೆಟ್ಟಿ, ಚಾಲಕ ನವೀನಚಂದ್ರ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.