ADVERTISEMENT

ನಾಯಕತ್ವ ಗುಣ ಮೈಗೂಡಿಸಿಕೊಳ್ಳಿ: ಡಾ. ಸವಿತಾ ಸುವರ್ಣ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 5:00 IST
Last Updated 10 ಆಗಸ್ಟ್ 2022, 5:00 IST

ಕಾರ್ಕಳ: ‘ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ಮೈಗೂಡಿಸಿಕೊಂಡಾಗ ಉದ್ಯೋಗ ರಂಗದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ’ ಎಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಸವಿತಾ ಸುವರ್ಣ ಹೇಳಿದರು.

ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ‘ನಾಯಕತ್ವ ಮತ್ತು ವೃತ್ತಿ ಮಾರ್ಗದರ್ಶನ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಕಿರಣ್ ಎಂ. ಅಧ್ಯಕ್ಷತೆ ವಹಿಸಿದ್ದರು. ಮೂಡುಬಿದರೆ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಪುನೀತ್ ಹಾಗೂ ಚೈತನ್ಯ ನಾಯಕತ್ವ ಕುರಿತು ಮಾಹಿತಿ ನೀಡಿದರು. ಕೆರಿಯರ್ ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್ಸ್ ಸೆಲ್‌ನ ಸಂಚಾಲಕ ನವೀನ್ ಹಾಗೂ ಮೈತ್ರಿ ಬಿ. ಇದ್ದರು.

ADVERTISEMENT

ವಿದ್ಯಾಧರ್ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಸುಬ್ರಹ್ಮಣ್ಯ ಕೆ. ಸಿ ಸ್ವಾಗತಿಸಿದರು. ಸುಷ್ಮಾ ರಾವ್ ಕೆ. ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.