ಉಡುಪಿ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಿಂದ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆಯಲು ಮಣಿಪಾಲದ ಕೆಎಂಸಿಗೆ ದಾಖಲಾಗಿದ್ದ ಇಬ್ಬರು ರೋಗಿಗಳಲ್ಲಿ ಎಚ್1ಎನ್1 ಸೋಂಕು ಇರುವುದು ಪತ್ತೆಯಾಗಿದೆ.
ಆಸ್ಪತ್ರೆಯಲ್ಲಿ ಮಂಗನ ರೋಗಕ್ಕೆ ಚಿಕಿತ್ಸೆ ಪಡೆಯಲು ದಾಖಲಾಗುತ್ತಿರುವವರ ಸಂಖ್ಯೆ ಏರಿಕೆಯಗುತ್ತಲೇ ಇದ್ದು, ಇಲ್ಲಿಯವರೆಗೂ 128 ಮಂದಿ ಚಿಕಿತ್ಸೆ ಪಡೆದಿದ್ದಾರೆ. 53 ರೋಗಿಗಳಲ್ಲಿ ಸೋಂಕು ಇರುವುದು ದೃಢಪಟ್ಟಿದೆ. 77 ಜನರಲ್ಲಿ ಸೋಂಕು ಕಂಡುಬಂದಿಲ್ಲ. 106 ಮಂದಿ ಚಿಕಿತ್ಸೆಪಡೆದು ಡಿಸ್ಚಾರ್ಜ್ ಆಗಿದ್ದಾರೆ. 24 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.