ADVERTISEMENT

ಬೈಂದೂರಿನಲ್ಲಿ ಭಾರಿ ಮಳೆ: ನೀರಿನ ರಭಸಕ್ಕೆ ಕೊಚ್ಚಿ ಹೋದ ದೋಣಿಗಳು

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 4:34 IST
Last Updated 2 ಆಗಸ್ಟ್ 2022, 4:34 IST
ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ದೋಣಿಯನ್ನು ತೀರಕ್ಕೆ ಎಳೆಯುತ್ತಿರುವುದು
ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ದೋಣಿಯನ್ನು ತೀರಕ್ಕೆ ಎಳೆಯುತ್ತಿರುವುದು    

ಉಡುಪಿ: ಬೈಂದೂರು ತಾಲ್ಲೂಕಿನಾದ್ಯಂತ ಭಾರಿ ಮಳೆ ಸುರಿದಿದ್ದು ಶಿರೂರು ಕಳುಹಿತ್ಲು ಭಾಗದಲ್ಲಿ ತೀರದಲ್ಲಿದ್ದ ದೋಣಿಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ.

30ಕ್ಕೂ ಹೆಚ್ಚು ದೋಣಿಗಳು ಹಾನಿಗೀಡಾಗಿದ್ದು ಮೀನುಗಾರರಿಗೆ ಅಪಾರ ನಷ್ಟ ಉಂಟಾಗಿದೆ.

ಸೋಮವಾರ ಸಂಜೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು ತಾಲ್ಲೂಕಿನ ಶಿರೂರು, ಯಡ್ತರೆ, ತಗ್ಗರ್ಸೆ, ನಾವುಂದ, ಕಿರಿಮಂಜೇಶ್ವರ ಮೊದಲಾದ ಗ್ರಾಮಗಳಲ್ಲಿ ನೆರೆ ಬಂದಿದೆ. ಗದ್ದೆ ಹಾಗೂ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.