ADVERTISEMENT

ಉಡುಪಿ: ಭಾರಿ ಮಳೆ, ಕೃತಕ ನೆರೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 8:21 IST
Last Updated 18 ಜುಲೈ 2021, 8:21 IST
ಕಾಪು ತಾಲ್ಲೂಕಿನಲ್ಲಿ ಅನಾರೋಗ್ಯ ಪೀಡಿತ ಮಹಿಳೆಯನ್ನು ಕುರ್ಚಿಯಲ್ಲಿ ಸಾಗಿಸುತ್ತಿರುವುದು
ಕಾಪು ತಾಲ್ಲೂಕಿನಲ್ಲಿ ಅನಾರೋಗ್ಯ ಪೀಡಿತ ಮಹಿಳೆಯನ್ನು ಕುರ್ಚಿಯಲ್ಲಿ ಸಾಗಿಸುತ್ತಿರುವುದು   

ಉಡುಪಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಕಾಪು ತಾಲ್ಲೂಕಿನಲ್ಲಿ ಹಲವು ಜನವಸತಿ ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿದೆ.

ಕಾಪು ತಾಲ್ಲೂಕಿನ ಮಜೂರು, ಉಳಿಯಾರು, ಕರಂದಾಡಿ, ಮಲ್ಲಾರಿನಲ್ಲಿ ನೆರೆ ಸೃಷ್ಟಿಯಾಗಿದ್ದು, ಜಲಾವೃತ ಪ್ರದೇಶಗಳಲ್ಲಿ ವಾಸವಿದ್ದವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಅನಾರೋಗ್ಯ ಪೀಡಿತ ಮಹಿಳೆಯೊಬ್ಬರನ್ನು ಸ್ಥಳೀಯರು ಕುರ್ಚಿಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು. ಮತ್ತೊಂದೆಡೆ, ಸಮುದ್ರ ಪ್ರಕ್ಷುಬ್ಧಗೊಂಡಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಉಡುಪಿ ನಗರ ವ್ಯಾಪ್ತಿಯಲ್ಲೂ ಹಲವು ಬಡಾವಣೆಗಳು ನೀರಿನಿಂದ ಜಲಾವೃತಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT