ADVERTISEMENT

ಉಡುಪಿ: ಮಳೆಗೆ ಮನೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 13 ಜೂನ್ 2021, 12:12 IST
Last Updated 13 ಜೂನ್ 2021, 12:12 IST

ಉಡುಪಿ: ಎರಡು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಗೆ ಜಿಲ್ಲೆಯಲ್ಲಿ ಹಲವು ಮನೆಗಳು ಕುಸಿದು ಬಿದ್ದಿವೆ. ಕಾರ್ಕಳ ತಾಲ್ಲೂಕಿನ ನಿಟ್ಟೆ, ಮಿಯಾರು, ಕಾಂತಾವರ, ಮಾಳ ಗ್ರಾಮದಲ್ಲಿ 9 ಮನೆಗಳಿಗೆ ಹಾನಿಯಾಗಿದೆ. ಕಾಪು ತಾಲ್ಲೂಕಿನ ನಂದಿಕೂರು, ಪಡು, ಮಲ್ಲಾರು, ತೆಂಕು, ನಾಡ್ಸಾಲು ಗ್ರಾಮದಲ್ಲಿ 6 ಮನೆಗಳ ಮೇಲೆ ಮರಬಿದ್ದು ಕುಸಿದು ಬಿದ್ದಿವೆ.

ಗಾಳಿ ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಬೈಂದೂರು, ಕುಂದಾಪುರ, ಹೆಬ್ರಿ, ಬ್ರಹ್ಮಾವರ, ಕಾರ್ಕಳ, ಕಾಪು ಹಾಗೂ ಉಡುಪಿ ತಾಲ್ಲೂಕುಗಳಲ್ಲಿ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ 8.3 ಸೆಂ.ಮೀ ಮಳೆಯಾಗಿದೆ.

ಜೂನ್ 16ರವರೆಗೆ ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್‌ ಮುನ್ಸೂಚನೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.