ADVERTISEMENT

ಉಡುಪಿ: ಗುಡುಗು ಸಿಡಿಲಿನ ಆರ್ಭಟ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 16:36 IST
Last Updated 20 ಏಪ್ರಿಲ್ 2021, 16:36 IST
ಮಂಗಳವಾರ ಉಡುಪಿಯಲ್ಲಿ ಸುರಿದ ಮಳೆಗೆ ಜಲಾವೃತಗೊಂಡಿರುವ ಪ್ರದೇಶದಲ್ಲಿ ಆಟೊ ಸಂಚರಿಸುತ್ತಿರುವ ದೃಶ್ಯ.
ಮಂಗಳವಾರ ಉಡುಪಿಯಲ್ಲಿ ಸುರಿದ ಮಳೆಗೆ ಜಲಾವೃತಗೊಂಡಿರುವ ಪ್ರದೇಶದಲ್ಲಿ ಆಟೊ ಸಂಚರಿಸುತ್ತಿರುವ ದೃಶ್ಯ.   

ಉಡುಪಿ: ನಗರದಲ್ಲಿ ಮಂಗಳವಾರ ಸಂಜೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಬಿರುಸಿನ ಮಳೆ ಸುರಿಯಿತು. ಸುಮಾರು ಒಂದು ತಾಸು ಸುರಿದ ಮಳೆಗೆ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು.

ಮಧ್ಯಾಹ್ನದವರೆಗೂ ಬಿರು ಬಿಸಿಲಿನಿಂದ ಕೂಡಿದ್ದ ವಾತಾವರಣ ಸಂಜೆಯ ವೇಳೆಗೆ ದಟ್ಟವಾದ ಮೋಡವಾಗಿ ಬದಲಾಯಿತು. ಬಳಿಕ ಮಳೆ ಸುರಿಯಿತು. ದಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪೆರದ ಅನುಭವ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT