Photos| ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ: ಕೆಲ ಪ್ರದೇಶಗಳು ಜಲಾವೃತ
ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಎಡೆಬಿಡದೆ ಸುರಿಯುತ್ತಿದ್ದು ಹಲವು ಪ್ರದೇಶಗಳು ಜಲಾವೃತಗೊಂಡಿವೆ.ಉಡುಪಿಯ ಕಲ್ಸಂಕ ತೋಡು ತುಂಬಿ ಹರಿಯುತ್ತಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ. ಬೈಲಕೆರೆ ಪ್ರದೇಶ ಜಲಾವೃತಗೊಂಡಿದೆ. ಸ್ವರ್ಣ ಹಾಗೂ ಸೀತಾ ನದಿಯ ನೀರಿನ ಮಟ್ಟ ಹೆಚ್ಚಾಗುತ್ತಿದೆ.