ಉಡುಪಿ: ಜಿಲ್ಲೆಯಾದ್ಯಂತ ಮಂಗಳವಾರ ಉತ್ತಮ ಮಳೆಯಾಗಿದೆ. ಬೆಳಗಿನ ಜಾವ ಕೆಲಹೊತ್ತು ಬಿರುಸಾಗಿ ಸುರಿದ ಮಳೆ ಬಳಿಕ ನಿರಂತರ ಬೀಳುತ್ತಿತ್ತು.
ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಆಗಾಗ ಜೋರಾಗಿ ಗಾಳಿ ಬೀಸುತ್ತಿತ್ತು. ಕುಂದಾಪುರ ತಾಲ್ಲೂಕಿನ ಹಲವೆಡೆ ಬಿರುಸಿನ ಮಳೆಯಾಗಿದೆ. ಮಳೆಗೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.
ಸಮುದ್ರದಲ್ಲಿ ಅಲೆಗಳ ಉಬ್ಬರವೂ ಹೆಚ್ಚಾಗಿದೆ. ಇನ್ನೆರಡು ದಿನ ಭಾರಿ ಮಳೆಯಾಗುವ ಸಾದ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಡುಪಿ ನಗರದ ಹಲವೆಡೆ ಹಲವು ತಾಸು ವಿದ್ಯುತ್ ವ್ಯತ್ಯಯ ಉಂಟಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.