ADVERTISEMENT

ಶಿವಪುರ: ಜಯಂತಿ ಆಚರಣೆ, ಸಾಧಕರ ಸನ್ಮಾನ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 4:34 IST
Last Updated 27 ಸೆಪ್ಟೆಂಬರ್ 2022, 4:34 IST
ಹೆಬ್ರಿ ಸಮೀಪದ ಶಿವಪುರ ಬಿಲ್ಲವರ ಸೇವಾ ಸಂಘದ ವತಿಯಿಂದ ಸೋಮವಾರ ಗುರು ಜಯಂತಿ ಆಚರಣೆ ಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಹೆಬ್ರಿ ಸಮೀಪದ ಶಿವಪುರ ಬಿಲ್ಲವರ ಸೇವಾ ಸಂಘದ ವತಿಯಿಂದ ಸೋಮವಾರ ಗುರು ಜಯಂತಿ ಆಚರಣೆ ಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.   

ಹೆಬ್ರಿ: ಶಿವಪುರ ಬಿಲ್ಲವರ ಸೇವಾ ಸಂಘದ ವತಿಯಿಂದ ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಆಚರಣೆ ಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಶಿವಪುರ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಶೇಖರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷ ಶಿಕ್ಷಕ ಹರೀಶ ಪೂಜಾರಿ, ನಾರಾಯಣಗುರು ವಿಚಾರ ವೇದಿಕೆಯ ಕಾರ್ಕಳ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಯರ್ಲಪಾಡಿ, ಶಿವಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ವೇತಾ ರಾಘವೇಂದ್ರ, ಹೆಬ್ರಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಗರಡಿ ಪೂಜಾರಿ, ವಿಠಲ ಪೂಜಾರಿ ಯಡ್ದೆ ಇದ್ದರು. ಸಂಘದ ಕೋಶಾಧಿಕಾರಿ ಹರೀಶ ಪೂಜಾರಿ ಸ್ವಾಗತಿಸಿದರು. ಉಮೇಶ್ ಪೂಜಾರಿ ನಿರೂಪಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ವಂದನಾ ಸುಧೀರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT