
ಹೆಬ್ರಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ನಾಡ್ಪಾಲು ಗ್ರಾಮದ ಸೋಮೇಶ್ವರ ಕಾಸನಮಕ್ಕಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ನಾಡ್ಪಾಲು ಗ್ರಾ.ಪಂ. ಅಧ್ಯಕ್ಷ ನವೀನ್ ಕುಮಾರ್ ಉದ್ಘಾಟಿಸಿದರು. ಮಾಜಿ ಅಧ್ಯಕ್ಷ ದಿನೇಶ ಹೆಗ್ಡೆ ಕಾಸನಮಕ್ಕಿ, ಕಾಲೇಜಿನ ಪ್ರಾಂಶುಪಾಲ ವಿದ್ಯಾಧರ ಹೆಗ್ಡೆ, ಕಾಸನಮಕ್ಕಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿಮಲಾ, ಹಿರಿಯರಾದ ರಾಮಣ್ಣ ಪೂಜಾರಿ, ಗ್ರಾ.ಪಂ. ಸದಸ್ಯ ರಾಘವೇಂದ್ರ ಹೆಗ್ಡೆ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಸೌಮ್ಯಾ ಹೆಗ್ಡೆ, ಅಂಗನವಾಡಿ ಶಿಕ್ಷಕಿ ಹೇಮಾಶ್ರೀ, ಎನ್.ಎಸ್.ಎಸ್ ನಾಯಕರಾದ ವಿನಾಯಕ, ಸಂಜನಾ, ಪ್ರಜ್ಞಾ, ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಎನ್.ಎಸ್.ಎಸ್ ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ ಸ್ವಾಗತಿಸಿ, ಶಿಬಿರದ ಉದ್ದೇಶ ತಿಳಿಸಿದರು. ಸಂಜನಾ ವಂದಿಸಿದರು. ಪವಿತ್ರಾ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.