
ಹೆಬ್ರಿ: ಶತಮಾನೋತ್ಸವ ಸಂಭ್ರಮದಲ್ಲಿರುವ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಸಂಭ್ರಮದ ವಿಜ್ಞಾಪನಾ ಮನವಿಯನ್ನು ಶುಕ್ರವಾರ ಪಡುಕುಡೂರು ಭದ್ರಕಾಳಿ ಅಮ್ಮನವರಿಗೆ ಹೂವಿನ ಪೂಜೆಯೊಂದಿಗೆ ಸಮರ್ಪಣೆ ಮಾಡಿ ಬಿಡುಗಡೆಗೊಳಿಸಲಾಯಿತು.
ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಪ್ರಶಾಂತ ಶೆಟ್ಟಿ ದೊಡ್ಮನೆ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು. ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ ಪಟೇಲರಮನೆ, ಸಂಚಾಲಕ ಪ್ರಸನ್ನ ಶೆಟ್ಟಿ ಪಡುಕುಡೂರು, ಪ್ರಧಾನ ಕಾರ್ಯದರ್ಶಿ ಹರೀಶ ಪೂಜಾರಿ ಎಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷ ಹರೀಶ ಪೂಜಾರಿ, ಪ್ರಮುಖರಾದ ಅಶೋಕ್ ಎಂ. ಶೆಟ್ಟಿ, ಉದಯ ಪೂಜಾರಿ, ಜ್ಯೋತಿ ಪ್ರಸಾದ ಶೆಟ್ಟಿ, ಸಂಚಾಲಕರು, ಸಹ ಸಂಚಾಲಕರು, ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.