ಉಡುಪಿ: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಕ್ಕೆ ಪ್ರತಿಯಾಗಿ ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಗುರುವಾರ ಕೇಸರಿ ಶಾಲು ಧರಿಸಿಕೊಂಡು ಬಂದು ಜೈ ಶ್ರೀರಾಮ್ ಘೋಷಣೆ ಕೂಗಿದರು.
ಕಾಲೇಜು ಗೇಟ್ ಎದುರು ಗುಂಪು ಸೇರಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಆವರಣ ಪ್ರವೇಶಿಸಲು ಸಿಬ್ಬಂದಿ ಅನುಮತಿ ನೀಡಲಿಲ್ಲ.
ನಂತರ ಕೇಸರಿ ಶಾಲು ತೆಗೆದು ವಿದ್ಯಾರ್ಥಿಗಳು ಕಾಲೇಜು ಒಳಗೆ ತೆರಳಿದರು.
ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.