ADVERTISEMENT

ಪಿಯುಸಿ ಪರೀಕ್ಷೆ: ಕೊನೆ ಕ್ಷಣದಲ್ಲಿ ಪ್ರವೇಶಪತ್ರ ಪಡೆದ ಮುಸ್ಲಿಂ ವಿದ್ಯಾರ್ಥಿನಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2022, 5:29 IST
Last Updated 22 ಏಪ್ರಿಲ್ 2022, 5:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಉಡುಪಿ: ಹಿಜಾಬ್‌ಗಾಗಿ ಕಾನೂನು ಹೋರಾಟ ನಡೆಸುತ್ತಿರುವ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಆರು ವಿದ್ಯಾರ್ಥಿನಿಯರ ಪೈಕಿ ಅಲಿಯಾ ಅಸಾದಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಪ್ರವೇಶ ಪತ್ರ ಪಡೆದುಕೊಂಡಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ರುದ್ರೇಗೌಡ ತಿಳಿಸಿದ್ದಾರೆ.

ಕೆಲವೇ ನಿಮಿಷಗಳಲ್ಲಿ ಪರೀಕ್ಷೆ ಆರಂಭವಾಗಲಿದ್ದು, ಉಳಿದ ವಿದ್ಯಾರ್ಥಿನಿಯರೂ ಪ್ರವೇಶಪತ್ರ ಪಡೆಯಬಹುದು ಎಂದು ಪ್ರಾಂಶುಪಾಲರು ಮಾಹಿತಿ ನೀಡಿದರು.

ಹಿಜಾಬ್ ಗೊಂದಲ ಆರಂಭವಾದ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರು ಶುಕ್ರವಾರ ವಾಣಿಜ್ಯ ವಿಭಾಗದ ಬುಸಿನೆಸ್ ಸ್ಟಡೀಸ್ ಪರೀಕ್ಷೆ ಬರೆಯಬೇಕಾಗಿದೆ. ನಾಲ್ವರು ವಿಜ್ಞಾನ ಪರೀಕ್ಷೆಗಳು ಬರೆಯಬೇಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.