ADVERTISEMENT

ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಹೆಚ್ಚಿಸಿ: ರಾಮಕೃಷ್ಣ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 3:00 IST
Last Updated 15 ಸೆಪ್ಟೆಂಬರ್ 2024, 3:00 IST
<div class="paragraphs"><p>ಶಿಬಿರದಲ್ಲಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ ಅವರನ್ನು ಸನ್ಮಾನಿಸಲಾಯಿತು</p></div>

ಶಿಬಿರದಲ್ಲಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ ಅವರನ್ನು ಸನ್ಮಾನಿಸಲಾಯಿತು

   

ಕಾಪು (ಪಡುಬಿದ್ರಿ): ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಹೆಚ್ಚಿಸಿ, ಸಾಧನೆ ಮಾಡಿ ದೇಶದ ಆರ್ಥಿಕತೆ, ಅಭಿವೃದ್ಧಿಯಲ್ಲಿ ಕೊಡುಗೆ ನೀಡಬೇಕೆಂದು ರೈತರಿಗೆ, ರೈತ ಮಹಿಳೆಯರಿಗೆ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ ಕರೆ ನೀಡಿದರು.

ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ವತಿಯಿಂದ ಶನಿವಾರ ಕೃಷಿ ಮಾಹಿತಿ ಶಿಬಿರದಲ್ಲಿ ಮಾತನಾಡಿದರು.

ADVERTISEMENT

ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಬಿಜೆಪಿಯ ಸದಸ್ಯತ್ವ ನೋಂದಣಿ ಬಗ್ಗೆ ಮಾಹಿತಿ
ನೀಡಿದರು.

ಕೃಷಿ ಕೇಂದ್ರದಲ್ಲಿ ಸಾಧನೆಗೈದ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ ಅವರನ್ನು ಸನ್ಮಾನಿಸಲಾಯಿತು.

ಬಿಜೆ‍ಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ರೈತ ಮೋರ್ಚಾ ಅಧ್ಯಕ್ಷ ಕೃಷ್ಣ ರಾವ್, ಪ್ರಧಾನ ಕಾರ್ಯದರ್ಶಿ ಕೇಶವ ಮೊಯ್ಲಿ, ಉಪಾಧ್ಯಕ್ಷ ಚಂದ್ರಹಾಸ್ ಕೋಟ್ಯಾನ್, ಕೋಶಾಧಿಕಾರಿ ಗಿರೀಶ್ ಪಾಂಗಾಳ, ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಕಾಮತ್, ಹರೀಶ್ ಕುಲಾಲ್, ಜನ ಪ್ರತಿನಿಧಿಗಳು, ಪ್ರಮುಖರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.